ತಾವು ಮುಖ್ಯಮಂತ್ರಿಯಾಗಿದ್ದಾಗ ಜಾತಿ ಗಣತಿಗೆ ಆದೇಶಿಸಿ, ಹಣವನ್ನೂ ಬಿಡುಗಡೆ ಮಾಡಿದ ಸಿದ್ದರಾಮಯ್ಯ ಅವರು ವರದಿಯನ್ನು ಯಾಕೆ ಬಿಡುಗಡೆ ಮಾಡಲಿಲ್ಲ. ತಮಗೆ ಆಗದಿದ್ದನ್ನು ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಸಿ.ಎಂ ಆಗಿದ್ದ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಹಾಗೂ ಈಗ ಬಿಜೆಪಿ ಸರ್ಕಾರದ ತಲೆಗೆ ಕಟ್ಟುತ್ತಿದ್ದಾರೆ. ವರದಿಯಲ್ಲಿ ಸಿದ್ದರಾಮಯ್ಯ ಅವರು ವಹಿಸಿರುವ ಪಾತ್ರ ಕುರಿತು ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವೆ. ನಮ್ಮ ಸರ್ಕಾರ ವರದಿಯನ್ನು ಒಪ್ಪಬೇಕೊ ಬೇಡವೊ ಎಂಬುದು ಕೇಂದ್ರದ ಮಟ್ಟದಲ್ಲಿ ತೀರ್ಮಾನವಾಗಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.