ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಣ ಇಲಾಖೆಗೆ ತ್ರಿಲೋಕ ಚಂದ್ರ ಆಯುಕ್ತ

Published : 6 ಅಕ್ಟೋಬರ್ 2024, 16:18 IST
Last Updated : 6 ಅಕ್ಟೋಬರ್ 2024, 16:18 IST
ಫಾಲೋ ಮಾಡಿ
Comments

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿ ಕೆ.ವಿ. ತ್ರಿಲೋಕಚಂದ್ರ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ ಅವರನ್ನು ಮುಖ್ಯಮಂತ್ರಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಶನಿವಾರ ಆದೇಶ ಹೊರಡಿಸಿದೆ. ತ್ರಿಲೋಕಚಂದ್ರ ಅವರಿಗೆ ಇದ್ದ ವಾರ್ತಾ ಇಲಾಖೆಯ ಹೊಣೆಯನ್ನೂ ಕಾವೇರಿಗೆ ವಹಿಸಲಾಗಿದೆ.

ಬಿಬಿಎಂಪಿ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತರಾಗಿದ್ದ ತ್ರಿಲೋಕಚಂದ್ರ ಅವರನ್ನು ಕಳೆದ ನವೆಂಬರ್‌ನಲ್ಲಿ ಮುಖ್ಯಮಂತ್ರಿಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT