ಸಂವಿಧಾನದ ಪೀಠಿಕೆ ಉಲ್ಲೇಖಿಸಿ ಮಾತನಾಡಿದ ಅವರು, ‘ವಿರೋಧಪಕ್ಷದ ನಾಯಕರು ನನ್ನ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ಈ ರೀತಿ ಮಾಡಿದರೆ, ಹೊಸ ಶಾಸಕರ ಕನಸು ನನಸಾಗುವುದಿಲ್ಲ. ನಾನು ಬಡತನದಿಂದ, ನೋವು ಅನುಭವಿಸಿ ಬಂದಿದ್ದೇನೆ. ನನ್ನ ತಂದೆ, ತಾಯಿಗೆ ಅನಾರೋಗ್ಯವಾದಾಗ ಸೂಕ್ತ ಚಿಕಿತ್ಸೆ ಸಿಗಲಿಲ್ಲ. ಆ ಕಾರಣಕ್ಕಾಗಿ ನನ್ನ ಕ್ಷೇತ್ರದಲ್ಲಿ 10 ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇನೆ. ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದಿದ್ದೇನೆ’ ಎಂದರು.