<p><strong>ಬೆಂಗಳೂರು:</strong> ‘ರಾಜ್ಯದ ಜನರು ಜಲಕ್ಷಾಮದಿಂದ ಹನಿ ಹನಿ ನೀರಿಗೂ ತತ್ತರಿಸುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಜನರ ತೆರಿಗೆ ಹಣದಿಂದ ಜಾತ್ರೆ ಮಾಡುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.</p>.<p>‘ರಾಜ್ಯದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೆ ಹೋಗಿದ್ದಾರೆ. 40 ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೇ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ’ ಎಂದು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<p>‘ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲ್ಲೂಕಿಗೆ ₹50 ಲಕ್ಷ, ಪ್ರತಿ ಜಿಲ್ಲೆಗೆ ₹1 ಕೋಟಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ₹2 ಕೋಟಿಯಂತೆ ಖರ್ಚು ಮಾಡಿ ಉತ್ಸವ ಮಾಡುತ್ತಿರುವ ಇವರಿಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಗ್ಯಾರಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬಹುದಿತ್ತು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ ಜನರು ಜಲಕ್ಷಾಮದಿಂದ ಹನಿ ಹನಿ ನೀರಿಗೂ ತತ್ತರಿಸುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಜನರ ತೆರಿಗೆ ಹಣದಿಂದ ಜಾತ್ರೆ ಮಾಡುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.</p>.<p>‘ರಾಜ್ಯದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೆ ಹೋಗಿದ್ದಾರೆ. 40 ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೇ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ’ ಎಂದು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<p>‘ರಾಜ್ಯದಲ್ಲಿ ಇಂತಹ ಸೂತಕದ ವಾತಾವರಣ ಇರುವಾಗ ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲ್ಲೂಕಿಗೆ ₹50 ಲಕ್ಷ, ಪ್ರತಿ ಜಿಲ್ಲೆಗೆ ₹1 ಕೋಟಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ ₹2 ಕೋಟಿಯಂತೆ ಖರ್ಚು ಮಾಡಿ ಉತ್ಸವ ಮಾಡುತ್ತಿರುವ ಇವರಿಗೆ ಕಿಂಚಿತ್ತಾದರೂ ಮಾನವೀಯತೆ, ಕರ್ತವ್ಯ ಪ್ರಜ್ಞೆ ಇದೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಗ್ಯಾರಂಟಿ ಸಮಾವೇಶಕ್ಕಾಗಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬಹುದಿತ್ತು’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>