<p><strong>ಬೆಂಗಳೂರು</strong>: ‘ಹಣ ಅಕ್ರಮ ವರ್ಗಾವಣೆಯ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯಾಕೆ ಇ.ಡಿ ನೋಟಿಸ್ ಕೊಟ್ಟಿಲ್ಲ’ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಪ್ರಶ್ನಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಪಕ್ಷಕ್ಕೆ ಯಾಕೆ ನೋಟಿಸ್ ಕೊಡಲಾಗಿದೆ. ಕೇಜ್ರಿವಾಲ್ ಮೇಲೆ ಯಾವ ಆರೋಪವೂ ಇಲ್ಲ. ಕೆಲವು ಸಾಕ್ಷ್ಯಗಳನ್ನು ಬಳಸಿಕೊಂಡು ಅವರನ್ನು ಬಂಧಿಸಲಾಗಿದೆ’ ಎಂದು ಕಿಡಿಕಾರಿದರು.</p>.<p>‘350 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿರುವ ಶೋಭಾ ಮೇಲೆ ₹ 48 ಕೋಟಿ ಹಣ ವರ್ಗಾವಣೆ ಆರೋಪವಿದೆ. ಇದು 2010ರಲ್ಲಿ ನಡೆದ ಹಗರಣ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣವಿದೆ. ಶೋಭಾ ಮೇಲೆ 24 ಗಂಭೀರ ಆರೋಪಗಳೂ ಇವೆ. ಇಷ್ಟಿದ್ದರೂ ಅವರನ್ನು ಕೇಂದ್ರದಲ್ಲಿ ಹೇಗೆ ಮಂತ್ರಿ ಮಾಡಲಾಗಿದೆ’ ಎಂದು ಪ್ರಶ್ನಿಸಿದರು.</p>.<p>ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವಿ.ರಾಜೀವ್ ಗೌಡ ಅವರು, ‘ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಇ.ಡಿ ಪ್ರಕರಣದಲ್ಲಿ ಆರೋಪಿ. ಅವರು ಇಲ್ಲಿ ನಾಮಪತ್ರ ಸಲ್ಲಿಕೆಗೂ ಮೊದಲು ಅವರ ಮೇಲೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಣ ಅಕ್ರಮ ವರ್ಗಾವಣೆಯ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯಾಕೆ ಇ.ಡಿ ನೋಟಿಸ್ ಕೊಟ್ಟಿಲ್ಲ’ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಪ್ರಶ್ನಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಪಕ್ಷಕ್ಕೆ ಯಾಕೆ ನೋಟಿಸ್ ಕೊಡಲಾಗಿದೆ. ಕೇಜ್ರಿವಾಲ್ ಮೇಲೆ ಯಾವ ಆರೋಪವೂ ಇಲ್ಲ. ಕೆಲವು ಸಾಕ್ಷ್ಯಗಳನ್ನು ಬಳಸಿಕೊಂಡು ಅವರನ್ನು ಬಂಧಿಸಲಾಗಿದೆ’ ಎಂದು ಕಿಡಿಕಾರಿದರು.</p>.<p>‘350 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿರುವ ಶೋಭಾ ಮೇಲೆ ₹ 48 ಕೋಟಿ ಹಣ ವರ್ಗಾವಣೆ ಆರೋಪವಿದೆ. ಇದು 2010ರಲ್ಲಿ ನಡೆದ ಹಗರಣ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣವಿದೆ. ಶೋಭಾ ಮೇಲೆ 24 ಗಂಭೀರ ಆರೋಪಗಳೂ ಇವೆ. ಇಷ್ಟಿದ್ದರೂ ಅವರನ್ನು ಕೇಂದ್ರದಲ್ಲಿ ಹೇಗೆ ಮಂತ್ರಿ ಮಾಡಲಾಗಿದೆ’ ಎಂದು ಪ್ರಶ್ನಿಸಿದರು.</p>.<p>ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವಿ.ರಾಜೀವ್ ಗೌಡ ಅವರು, ‘ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಇ.ಡಿ ಪ್ರಕರಣದಲ್ಲಿ ಆರೋಪಿ. ಅವರು ಇಲ್ಲಿ ನಾಮಪತ್ರ ಸಲ್ಲಿಕೆಗೂ ಮೊದಲು ಅವರ ಮೇಲೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>