<p>ಬೆಂಗಳೂರು: ಆದಿವಾಸಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದರೆ, ಹಲ್ಲೆ, ಕೊಲೆ ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.</p>.<p>ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್, ತಿಂಥಿಣಿ ವೀರಗೋಟದ ಕಾಗಿನೆಲೆ ಕನಕಗುರು ಪೀಠದ ಆಶ್ರಯದಲ್ಲಿ ಬುಧವಾರ ನಡೆದ 29 ನೇ ವಿಶ್ವ ಆದಿವಾಸಿ ದಿನಾಚರಣೆ ಹಾಗೂ ಆದಿವಾಸಿಗಳ ಕಲಾಮೇಳ ಉದ್ಘಾಟಿಸಿ ಮಾತನಾಡಿದರು.</p>.<p>‘ಆದಿವಾಸಿಗಳ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ಈ ಹಿಂದೆ ಯಾರೂ ನನಗೆ ದೂರು ನೀಡಿರಲಿಲ್ಲ. ಇವತ್ತು ಮಾಹಿತಿ ನೀಡಿದ್ದೀರಿ. ಅದರ ಸತ್ಯಾಸತ್ಯತೆ ಪರಿಶೀಲಿಸಲಾಗುವುದು. ದೌರ್ಜನ್ಯ ನಡೆದಿರುವುದು ನಿಜವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಅರಣ್ಯ ಹಕ್ಕು ಕಾಯ್ದೆಯಡಿ ವಿಲೇವಾರಿ ಆಗದ ಪ್ರಕರಣಗಳಿದ್ದರೆ ಕೂಡಲೇ ವಿಲೇ ಮಾಡಲಾಗುವುದು. 3 ಎಕರೆವರೆಗೆ ಜಮೀನು ಹೊಂದಿರುವವರನ್ನು ಒಕ್ಕೆಲೆಬ್ಬಿಸುವುದಿಲ್ಲ. ಅದಕ್ಕಿಂತ ಹೆಚ್ಚು ಕಾಡಿನ ಜಮೀನು ಆಕ್ರಮಿಸಿಕೊಂಡವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಜನರೂ ಬದುಕಬೇಕು. ಕಾಡು, ಪರಿಸರವೂ ಉಳಿಯಬೇಕು ಎಂದರು.</p>.<p>ಕೆಪಿಸಿಸಿ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷ ಸಿ.ಎಸ್.ದ್ವಾರಕನಾಥ ಮಾತನಾಡಿ, ‘ರಾಜ್ಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದಿಂದ ಆದಿವಾಸಿ ಸಮುದಾಯದ 19 ಮಂದಿ ಸಾವಿಗೀಡಾಗಿದ್ದಾರೆ. ಹಲವು ಕಡೆಗಳಲ್ಲಿ ಆದಿವಾಸಿಗಳ ಮೇಲೆಯೇ ದೂರು ದಾಖಲಾಗಿದೆ‘ ಎಂದು ಮಾಹಿತಿ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮಾತನಾಡಿ, ‘ಕಾಡನ್ನು ಆದಿವಾಸಿಗಳು ಉಳಿಸುತ್ತಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳು ಹಾಳುಗೆಡಹುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ವೀರಗೋಟ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಆದಿವಾಸಿ ರಕ್ಷಣಾ ಪರಿಷತ್ ರಾಜ್ಯಾಧ್ಯಕ್ಷ ಎಂ. ಕೃಷ್ಣಯ್ಯ, ಗೌರವಾಧ್ಯಕ್ಷ ಕೆ.ಎಂ. ಮೇತ್ರಿ, ಬುಡಕಟ್ಟು ಸಮುದಾಯಗಳ ಹೋರಾಟಗಾರ ಅಮೃತ್ರಾವ್ ಚಿಮ್ಕೋಡ್, ನಟ ಚೇತನ್ ಅಹಿಂಸಾ ಮಾತನಾಡಿದರು.</p>.<p>ಶೈಕ್ಷಣಿಕ ಸಾಧನೆಗಾಗಿ ಬುಡಕಟ್ಟು ಸಮುದಾಯಗಳ ಕಾವ್ಯಶ್ರೀ ಕೆ., ಸಂಗೀತಾ ಜೆ.ಕೆ., ಅಶ್ವಥ್ ಬಿ.ಆರ್., ಶ್ರೀಜಿತ್ ಎಸ್. ಅವರಿಗೆ ಆದಿವಾಸಿ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆ.ಎಂ. ಮೇತ್ರಿ ಅವರ ‘ಸೂಕ್ಷ್ಮ ಮೂಲ ಆದಿವಾಸಿಗಳು’ ಕೃತಿ ಬಿಡುಗಡೆ ಮಾಡಲಾಯಿತು.</p>.<p>‘ಆದಿವಾಸಿ ಹಣ ಬೇರೆ ಯೋಜನೆಗೆ ಬೇಡ’ ಆದಿವಾಸಿಗಳ ದಲಿತರ ಅಭಿವೃದ್ಧಿಗೆ ಮೀಸಲಿರಿಸುವ ಎಸ್ಸಿಪಿ ಟಿಎಸ್ಪಿ ಹಣವನ್ನು ಚುನಾವಣಾ ರಾಜಕೀಯ ಯೋಜನೆಗಳಿಗೆ ಬಳಸುವುದು ಸರಿಯಲ್ಲ. ಶ್ರೀಮಂತರಿಗೆ ತೆರಿಗೆ ವಿಧಿಸಿ ಆ ಹಣವನ್ನು ಬೇಕಾದರೆ ಆ ಯೋಜನೆಗಳಿಗೆ ಬಳಸಿಕೊಳ್ಳಿ ಎಂದು ನಟ ಚೇತನ್ ಅಹಿಂಸಾ ಸಲಹೆ ನೀಡಿದರು. ಎಸ್ಟಿಯಲ್ಲಿ ಬರುವ ಎಲ್ಲ ಸಮುದಾಯಗಳಿಗೆ ಸರ್ಕಾರದ ಸೌಲಭ್ಯ ಸಿಗಬೇಕಿದ್ದರೆ ಎಸ್ಟಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆದಿವಾಸಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದರೆ, ಹಲ್ಲೆ, ಕೊಲೆ ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.</p>.<p>ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್, ತಿಂಥಿಣಿ ವೀರಗೋಟದ ಕಾಗಿನೆಲೆ ಕನಕಗುರು ಪೀಠದ ಆಶ್ರಯದಲ್ಲಿ ಬುಧವಾರ ನಡೆದ 29 ನೇ ವಿಶ್ವ ಆದಿವಾಸಿ ದಿನಾಚರಣೆ ಹಾಗೂ ಆದಿವಾಸಿಗಳ ಕಲಾಮೇಳ ಉದ್ಘಾಟಿಸಿ ಮಾತನಾಡಿದರು.</p>.<p>‘ಆದಿವಾಸಿಗಳ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ಈ ಹಿಂದೆ ಯಾರೂ ನನಗೆ ದೂರು ನೀಡಿರಲಿಲ್ಲ. ಇವತ್ತು ಮಾಹಿತಿ ನೀಡಿದ್ದೀರಿ. ಅದರ ಸತ್ಯಾಸತ್ಯತೆ ಪರಿಶೀಲಿಸಲಾಗುವುದು. ದೌರ್ಜನ್ಯ ನಡೆದಿರುವುದು ನಿಜವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಅರಣ್ಯ ಹಕ್ಕು ಕಾಯ್ದೆಯಡಿ ವಿಲೇವಾರಿ ಆಗದ ಪ್ರಕರಣಗಳಿದ್ದರೆ ಕೂಡಲೇ ವಿಲೇ ಮಾಡಲಾಗುವುದು. 3 ಎಕರೆವರೆಗೆ ಜಮೀನು ಹೊಂದಿರುವವರನ್ನು ಒಕ್ಕೆಲೆಬ್ಬಿಸುವುದಿಲ್ಲ. ಅದಕ್ಕಿಂತ ಹೆಚ್ಚು ಕಾಡಿನ ಜಮೀನು ಆಕ್ರಮಿಸಿಕೊಂಡವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಜನರೂ ಬದುಕಬೇಕು. ಕಾಡು, ಪರಿಸರವೂ ಉಳಿಯಬೇಕು ಎಂದರು.</p>.<p>ಕೆಪಿಸಿಸಿ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷ ಸಿ.ಎಸ್.ದ್ವಾರಕನಾಥ ಮಾತನಾಡಿ, ‘ರಾಜ್ಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದಿಂದ ಆದಿವಾಸಿ ಸಮುದಾಯದ 19 ಮಂದಿ ಸಾವಿಗೀಡಾಗಿದ್ದಾರೆ. ಹಲವು ಕಡೆಗಳಲ್ಲಿ ಆದಿವಾಸಿಗಳ ಮೇಲೆಯೇ ದೂರು ದಾಖಲಾಗಿದೆ‘ ಎಂದು ಮಾಹಿತಿ ನೀಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮಾತನಾಡಿ, ‘ಕಾಡನ್ನು ಆದಿವಾಸಿಗಳು ಉಳಿಸುತ್ತಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳು ಹಾಳುಗೆಡಹುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>ವೀರಗೋಟ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಆದಿವಾಸಿ ರಕ್ಷಣಾ ಪರಿಷತ್ ರಾಜ್ಯಾಧ್ಯಕ್ಷ ಎಂ. ಕೃಷ್ಣಯ್ಯ, ಗೌರವಾಧ್ಯಕ್ಷ ಕೆ.ಎಂ. ಮೇತ್ರಿ, ಬುಡಕಟ್ಟು ಸಮುದಾಯಗಳ ಹೋರಾಟಗಾರ ಅಮೃತ್ರಾವ್ ಚಿಮ್ಕೋಡ್, ನಟ ಚೇತನ್ ಅಹಿಂಸಾ ಮಾತನಾಡಿದರು.</p>.<p>ಶೈಕ್ಷಣಿಕ ಸಾಧನೆಗಾಗಿ ಬುಡಕಟ್ಟು ಸಮುದಾಯಗಳ ಕಾವ್ಯಶ್ರೀ ಕೆ., ಸಂಗೀತಾ ಜೆ.ಕೆ., ಅಶ್ವಥ್ ಬಿ.ಆರ್., ಶ್ರೀಜಿತ್ ಎಸ್. ಅವರಿಗೆ ಆದಿವಾಸಿ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆ.ಎಂ. ಮೇತ್ರಿ ಅವರ ‘ಸೂಕ್ಷ್ಮ ಮೂಲ ಆದಿವಾಸಿಗಳು’ ಕೃತಿ ಬಿಡುಗಡೆ ಮಾಡಲಾಯಿತು.</p>.<p>‘ಆದಿವಾಸಿ ಹಣ ಬೇರೆ ಯೋಜನೆಗೆ ಬೇಡ’ ಆದಿವಾಸಿಗಳ ದಲಿತರ ಅಭಿವೃದ್ಧಿಗೆ ಮೀಸಲಿರಿಸುವ ಎಸ್ಸಿಪಿ ಟಿಎಸ್ಪಿ ಹಣವನ್ನು ಚುನಾವಣಾ ರಾಜಕೀಯ ಯೋಜನೆಗಳಿಗೆ ಬಳಸುವುದು ಸರಿಯಲ್ಲ. ಶ್ರೀಮಂತರಿಗೆ ತೆರಿಗೆ ವಿಧಿಸಿ ಆ ಹಣವನ್ನು ಬೇಕಾದರೆ ಆ ಯೋಜನೆಗಳಿಗೆ ಬಳಸಿಕೊಳ್ಳಿ ಎಂದು ನಟ ಚೇತನ್ ಅಹಿಂಸಾ ಸಲಹೆ ನೀಡಿದರು. ಎಸ್ಟಿಯಲ್ಲಿ ಬರುವ ಎಲ್ಲ ಸಮುದಾಯಗಳಿಗೆ ಸರ್ಕಾರದ ಸೌಲಭ್ಯ ಸಿಗಬೇಕಿದ್ದರೆ ಎಸ್ಟಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>