ಬಾಗಲಕೋಟೆ: ‘ರನ್ನ ಪ್ರಶಸ್ತಿ’ಗೆ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರನ್ನು ಆಯ್ಕೆ ಮಾಡಲಾಗಿದೆ. ‘ಪ್ರಶಸ್ತಿಯು ₨ ೧ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಇದೇ 14ರಂದು ನಡೆಯಲಿರುವ ‘ರನ್ನ ವೈಭವ’ ಸಾಂಸ್ಕೃತಿಕ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಮುಧೋಳದ ರನ್ನ ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪಿ.ಎ. ಮೇಘಣ್ಣವರ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.