<p><strong>ಇಸ್ಲಾಮಾಬಾದ್</strong>: ಗಡಿಯಾಚೆಗಿನ ಚಟುವಟಿಕೆಗಳು ಭಯೋತ್ಪಾದನೆ, ಉಗ್ರವಾದ ಮತ್ತು ಪ್ರತ್ಯೇಕವಾದದಿಂದ ಕೂಡಿದ್ದರೆ, ವಾಣಿಜ್ಯ, ಇಂಧನ ಮತ್ತು ಸಂಪರ್ಕದಂತಹ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿ ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಹೇಳಿದ್ದಾರೆ. ಆ ಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.</p><p>ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ಇಸ್ಲಾಮಾಬಾದ್ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಸಮಾವೇಶದಲ್ಲಿ ಭಾರತೀಯ ನಿಯೋಗವು ಜೈಶಂಕರ್ ನೇತೃತ್ವದಲ್ಲಿ ಪಾಲ್ಗೊಂಡಿದೆ.</p><p>ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಸಚಿವ, 'ಸಹಕಾರವು ಪರಸ್ಪರ ಗೌರವ, ಪ್ರಾದೇಶಿಕ ಸಮಗ್ರತೆ ಮತ್ತು ರಾಷ್ಟ್ರಗಳ ಸಾರ್ವಭೌಮತೆಯನ್ನು ಗೌರವಿಸುವುದರ ಆಧಾರದಲ್ಲಿ ಇರಬೇಕು' ಎಂದು ಪ್ರತಿಪಾದಿಸಿದ್ದಾರೆ.</p><p>ಎಲ್ಲರೂ ಒಟ್ಟಾಗಿ ಸಾಗಿದರೆ ಮಾತ್ರ, 'ಎಸ್ಸಿಒ ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಲಾಭ ಸಾಧ್ಯ' ಎಂದು ಒತ್ತಿ ಹೇಳಿದ್ದಾರೆ.</p><p>'ಸಹಕಾರವು ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಗುರುತಿಸಬೇಕು. ಯಾವುದೇ ರೀತಿಯ ಏಕಪಕ್ಷೀಯ ಕಾರ್ಯಸೂಚಿಗಳಿಲ್ಲದೆ ಪ್ರಾಮಾಣಿಕ ಪಾಲುದಾರಿಕೆಯಲ್ಲಿ ಅದು ರಚನೆಯಾಗಬೇಕು. ಮುಖ್ಯವಾಗಿ ವಾಣಿಜ್ಯ ಮತ್ತು ಸಂಪರ್ಕದ ವಿಚಾರದಲ್ಲಿ ಜಾಗತಿಕ ಕ್ರಮಗಳನ್ನು ಅನುಸರಿಸಿದರೆ ಪ್ರಗತಿ ಸಾಧ್ಯವಿಲ್ಲ' ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಪ್ರಮುಖ ವಿಚಾರಗಳಲ್ಲಿ ಮೂಗು ತೂರಿಸುವ ಚೀನಾದ ನಡೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.</p>.SCO Summit: ಔತಣಕೂಟಕ್ಕೂ ಮುನ್ನ ಭರತನಾಟ್ಯ ಆಯೋಜಿಸಿದ್ದ ಪಾಕ್ ಪ್ರಧಾನಿ!.SCO Summit: ಪಾಕ್ನಲ್ಲಿ ಜೈಶಂಕರ್ಗೆ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಗಡಿಯಾಚೆಗಿನ ಚಟುವಟಿಕೆಗಳು ಭಯೋತ್ಪಾದನೆ, ಉಗ್ರವಾದ ಮತ್ತು ಪ್ರತ್ಯೇಕವಾದದಿಂದ ಕೂಡಿದ್ದರೆ, ವಾಣಿಜ್ಯ, ಇಂಧನ ಮತ್ತು ಸಂಪರ್ಕದಂತಹ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿ ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಹೇಳಿದ್ದಾರೆ. ಆ ಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.</p><p>ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ಇಸ್ಲಾಮಾಬಾದ್ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಸಮಾವೇಶದಲ್ಲಿ ಭಾರತೀಯ ನಿಯೋಗವು ಜೈಶಂಕರ್ ನೇತೃತ್ವದಲ್ಲಿ ಪಾಲ್ಗೊಂಡಿದೆ.</p><p>ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಸಚಿವ, 'ಸಹಕಾರವು ಪರಸ್ಪರ ಗೌರವ, ಪ್ರಾದೇಶಿಕ ಸಮಗ್ರತೆ ಮತ್ತು ರಾಷ್ಟ್ರಗಳ ಸಾರ್ವಭೌಮತೆಯನ್ನು ಗೌರವಿಸುವುದರ ಆಧಾರದಲ್ಲಿ ಇರಬೇಕು' ಎಂದು ಪ್ರತಿಪಾದಿಸಿದ್ದಾರೆ.</p><p>ಎಲ್ಲರೂ ಒಟ್ಟಾಗಿ ಸಾಗಿದರೆ ಮಾತ್ರ, 'ಎಸ್ಸಿಒ ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಲಾಭ ಸಾಧ್ಯ' ಎಂದು ಒತ್ತಿ ಹೇಳಿದ್ದಾರೆ.</p><p>'ಸಹಕಾರವು ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಗುರುತಿಸಬೇಕು. ಯಾವುದೇ ರೀತಿಯ ಏಕಪಕ್ಷೀಯ ಕಾರ್ಯಸೂಚಿಗಳಿಲ್ಲದೆ ಪ್ರಾಮಾಣಿಕ ಪಾಲುದಾರಿಕೆಯಲ್ಲಿ ಅದು ರಚನೆಯಾಗಬೇಕು. ಮುಖ್ಯವಾಗಿ ವಾಣಿಜ್ಯ ಮತ್ತು ಸಂಪರ್ಕದ ವಿಚಾರದಲ್ಲಿ ಜಾಗತಿಕ ಕ್ರಮಗಳನ್ನು ಅನುಸರಿಸಿದರೆ ಪ್ರಗತಿ ಸಾಧ್ಯವಿಲ್ಲ' ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಪ್ರಮುಖ ವಿಚಾರಗಳಲ್ಲಿ ಮೂಗು ತೂರಿಸುವ ಚೀನಾದ ನಡೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.</p>.SCO Summit: ಔತಣಕೂಟಕ್ಕೂ ಮುನ್ನ ಭರತನಾಟ್ಯ ಆಯೋಜಿಸಿದ್ದ ಪಾಕ್ ಪ್ರಧಾನಿ!.SCO Summit: ಪಾಕ್ನಲ್ಲಿ ಜೈಶಂಕರ್ಗೆ ಸ್ವಾಗತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>