ದಿಸ್ಸನಾಯಕೆಯವರೇ ಹರಿಣಿಯವರನ್ನು ಪ್ರಧಾನಿಯನ್ನಾಗಿ ನೇಮಕಗೊಳಿಸಿದರು. ಅವರೂ ಸೇರಿ ಒಟ್ಟು ನಾಲ್ಕು ಮಂದಿಯನ್ನು ಸಚಿವರನ್ನಾಗಿಯೂ ನೇಮಕ ಮಾಡಿದ್ದಾರೆ.
ಹರಿಣಿಯವರಿಗೆ ನ್ಯಾಯ, ಶಿಕ್ಷಣ, ಕಾರ್ಮಿಕ, ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಹಾಗೂ ಬಂಡವಾಳ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ಅಧ್ಯಕ್ಷೀಯ ಚುನಾವಣೆಯ ಬಳಿಕ ಪ್ರಧಾನಿ ಹುದ್ದೆಗೆ ದಿನೇಶ್ ಗುಣವರ್ಧನ ಅವರು ರಾಜೀನಾಮೆ ನೀಡಿದ್ದರು. ಅವರ ಸ್ಥಾನವನ್ನು ಹರಿಣಿ ತುಂಬಲಿದ್ದಾರೆ.