ಇಸ್ಲಾಮಾಬಾದ್: ‘ಪಾಕಿಸ್ತಾನದ ಸರ್ಕಾರದ ವಿರುದ್ಧ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಿ, ಬೆಂಬಲಿಸಬೇಕು’ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕರೊಬ್ಬರು ವಿದೇಶಾಂಗ ಸಚಿವ ಎಸ್.ಜೈಶಂಕರ್ರಿಗೆ ಕೋರಿದ್ದಾರೆ.
‘ಪ್ರತಿಭಟನೆಯಲ್ಲಿ ಭಾಗವಹಿಸಿ, ಜನರೊಂದಿಗೆ ಮಾತನಾಡಲು ಜೈಶಂಕರ್ ಅವರಿಗೆ ಪಿಟಿಐ ಆಹ್ವಾನಿಸುತ್ತಿದೆ’ ಎಂದು ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಮಾಹಿತಿ ಸಲಹೆಗಾರ ಮುಹಮ್ಮದ್ ಅಲಿ ಸೈಫ್ ’ಜಿಯೋ ನ್ಯೂಸ್‘ ಕಾರ್ಯಕ್ರಮವೊಂದರಲ್ಲಿ ಹೇಳಿದರು.
ಅಕ್ಟೋಬರ್ 15 ಮತ್ತು 16 ರಂದು ಪಾಕಿಸ್ತಾನದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜೈಶಂಕರ್ ಅವರು ಭೇಟಿ ನೀಡಲಿದ್ದಾರೆ.