<p><strong>ವಾಷಿಂಗ್ಟನ್:</strong> ‘ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವಲ್ಲಿ ಭಾರತವು ರಚನಾತ್ಮಕ ಪಾತ್ರ ವಹಿಸಿದರೆ, ರಷ್ಯಾದೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗುತ್ತದೆ’ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲೇ ರಷ್ಯಾ ರಾಜಧಾನಿ ಮಾಸ್ಕೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಮರುದಿನವೇ ಅಮೆರಿಕದ ಐರೋಪ್ಯ ಭದ್ರತೆ ಹಾಗೂ ರಾಜಕೀಯ ವ್ಯವಹಾರಗಳ ಕಚೇರಿಯ ನಿರ್ದೇಶಕ ಲಿಯಾಮ್ ವಾಸ್ಲೆ ಈ ಹೇಳಿಕೆ ನೀಡಿದ್ದಾರೆ. </p>.<p>‘ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಹಾಗೂ ಅವರ ದೇಶವು ಅಮೆರಿಕ, ನ್ಯಾಟೋ ಪಡೆಗಳಿಗೆ ಎಷ್ಟೊಂದು ಅಪಾಯಕಾರಿಯಾಗಿದೆ ಎಂಬುದನ್ನು ಭಾರತೀಯರು ಅರ್ಥ ಮಾಡಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ. </p>.<p>‘ಇದು ಪ್ರಜಾಪ್ರಭುತ್ವದ ಶತಕೋಟಿ ಜನರ ಭದ್ರತೆಗೆ ನೇರ ಬೆದರಿಕೆಯಾಗಿದೆ’ ಎಂದು ವಾಸ್ಲೆ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>‘ನ್ಯಾಟೊ ಮಿತ್ರರಾಷ್ಟ್ರಗಳು ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಭಾರತೀಯರು ಕೂಡ ಅರ್ಥೈಸಿಕೊಳ್ಳಬೇಕು. ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಭಾರತವು ರಚನಾತ್ಮಕ ಪಾತ್ರ ವಹಿಸುವುದು ನಿಜವಾಗಿಯೂ ಮುಖ್ಯವಾಗಿದೆ’ ಎಂದು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ‘ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವಲ್ಲಿ ಭಾರತವು ರಚನಾತ್ಮಕ ಪಾತ್ರ ವಹಿಸಿದರೆ, ರಷ್ಯಾದೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗುತ್ತದೆ’ ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲೇ ರಷ್ಯಾ ರಾಜಧಾನಿ ಮಾಸ್ಕೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಮರುದಿನವೇ ಅಮೆರಿಕದ ಐರೋಪ್ಯ ಭದ್ರತೆ ಹಾಗೂ ರಾಜಕೀಯ ವ್ಯವಹಾರಗಳ ಕಚೇರಿಯ ನಿರ್ದೇಶಕ ಲಿಯಾಮ್ ವಾಸ್ಲೆ ಈ ಹೇಳಿಕೆ ನೀಡಿದ್ದಾರೆ. </p>.<p>‘ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಹಾಗೂ ಅವರ ದೇಶವು ಅಮೆರಿಕ, ನ್ಯಾಟೋ ಪಡೆಗಳಿಗೆ ಎಷ್ಟೊಂದು ಅಪಾಯಕಾರಿಯಾಗಿದೆ ಎಂಬುದನ್ನು ಭಾರತೀಯರು ಅರ್ಥ ಮಾಡಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ. </p>.<p>‘ಇದು ಪ್ರಜಾಪ್ರಭುತ್ವದ ಶತಕೋಟಿ ಜನರ ಭದ್ರತೆಗೆ ನೇರ ಬೆದರಿಕೆಯಾಗಿದೆ’ ಎಂದು ವಾಸ್ಲೆ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.</p>.<p>‘ನ್ಯಾಟೊ ಮಿತ್ರರಾಷ್ಟ್ರಗಳು ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಭಾರತೀಯರು ಕೂಡ ಅರ್ಥೈಸಿಕೊಳ್ಳಬೇಕು. ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಭಾರತವು ರಚನಾತ್ಮಕ ಪಾತ್ರ ವಹಿಸುವುದು ನಿಜವಾಗಿಯೂ ಮುಖ್ಯವಾಗಿದೆ’ ಎಂದು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>