<p><strong>ರಿಯಾದ್</strong>: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸೆರ್ಗೆ ಲ್ಯಾವ್ರೊಫ್ ಅವರನ್ನು ಸೋಮವಾರ ಸೌದಿ ರಾಜಧಾನಿ ರಿಯಾದ್ನಲ್ಲಿ ಭೇಟಿಯಾದರು.</p>.<p>ಉಕ್ರೇನ್ ಸಂಘರ್ಷದ ವಿಚಾರವಾಗಿ ಭಾರತ ಸೇರಿ ಮೂರು ದೇಶಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಿಳಿಸಿದ ಬೆನ್ನಲ್ಲೇ ಉಭಯ ದೇಶಗಳ ನಾಯಕರು ಭೇಟಿಯಾಗಿದ್ದಾರೆ.</p>.<p>ಭಾರತ–ಗಲ್ಫ್ ಸಹಕಾರ ಮಂಡಳಿಯ ವಿದೇಶಾಂಗ ಸಚಿವರ ಸಭೆಯ ಮಧ್ಯೆಯೇ ಜೈಶಂಕರ್ ಮತ್ತು ಲ್ಯಾವ್ರೊಫ್ ಅವರು ಸಂವಾದ ನಡೆಸಿದರು.</p>.<p>ಗಲ್ಫ್ ಸಹಕಾರ ಮಂಡಳಿಯು ಯುಎಇ, ಬಹರೈನ್, ಸೌದಿ ಅರೇಬಿಯಾ, ಒಮಾನ್, ಕತಾರ್ ಮತ್ತು ಕುವೈತ್ ದೇಶಗಳನ್ನು ಒಳಗೊಂಡಿದೆ.</p>.<p>ಜೈಶಂಕರ್ ಅವರು ಮೂರು ದೇಶಗಳ ಪ್ರವಾಸದ ಭಾಗವಾಗಿ ಭಾನುವಾರ ಸೌದಿ ರಾಜಧಾನಿಗೆ ಭೇಟಿ ನೀಡಿದ್ದಾರೆ. ನಂತರ ಜರ್ಮನಿಗೆ ಪ್ರಯಾಣ ಬೆಳೆಸಿ, ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗೆ ಮತ್ತು ಇತರ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರವಾಸದ ಕೊನೆಯ ದಿನ ಜಿನೆವಾಗೆ ಭೇಟಿ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಯಾದ್</strong>: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸೆರ್ಗೆ ಲ್ಯಾವ್ರೊಫ್ ಅವರನ್ನು ಸೋಮವಾರ ಸೌದಿ ರಾಜಧಾನಿ ರಿಯಾದ್ನಲ್ಲಿ ಭೇಟಿಯಾದರು.</p>.<p>ಉಕ್ರೇನ್ ಸಂಘರ್ಷದ ವಿಚಾರವಾಗಿ ಭಾರತ ಸೇರಿ ಮೂರು ದೇಶಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಿಳಿಸಿದ ಬೆನ್ನಲ್ಲೇ ಉಭಯ ದೇಶಗಳ ನಾಯಕರು ಭೇಟಿಯಾಗಿದ್ದಾರೆ.</p>.<p>ಭಾರತ–ಗಲ್ಫ್ ಸಹಕಾರ ಮಂಡಳಿಯ ವಿದೇಶಾಂಗ ಸಚಿವರ ಸಭೆಯ ಮಧ್ಯೆಯೇ ಜೈಶಂಕರ್ ಮತ್ತು ಲ್ಯಾವ್ರೊಫ್ ಅವರು ಸಂವಾದ ನಡೆಸಿದರು.</p>.<p>ಗಲ್ಫ್ ಸಹಕಾರ ಮಂಡಳಿಯು ಯುಎಇ, ಬಹರೈನ್, ಸೌದಿ ಅರೇಬಿಯಾ, ಒಮಾನ್, ಕತಾರ್ ಮತ್ತು ಕುವೈತ್ ದೇಶಗಳನ್ನು ಒಳಗೊಂಡಿದೆ.</p>.<p>ಜೈಶಂಕರ್ ಅವರು ಮೂರು ದೇಶಗಳ ಪ್ರವಾಸದ ಭಾಗವಾಗಿ ಭಾನುವಾರ ಸೌದಿ ರಾಜಧಾನಿಗೆ ಭೇಟಿ ನೀಡಿದ್ದಾರೆ. ನಂತರ ಜರ್ಮನಿಗೆ ಪ್ರಯಾಣ ಬೆಳೆಸಿ, ಅಲ್ಲಿನ ವಿದೇಶಾಂಗ ವ್ಯವಹಾರಗಳ ಸಚಿವರೊಂದಿಗೆ ಮತ್ತು ಇತರ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರವಾಸದ ಕೊನೆಯ ದಿನ ಜಿನೆವಾಗೆ ಭೇಟಿ ನೀಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>