ಭಾನುವಾರ, 29 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೇಪಾಳ ಪ್ರವಾಹ: ನೂರರ ಗಡಿ ದಾಟಿದ ಸಾವಿನ ಸಂಖ್ಯೆ

Published : 29 ಸೆಪ್ಟೆಂಬರ್ 2024, 5:03 IST
Last Updated : 29 ಸೆಪ್ಟೆಂಬರ್ 2024, 5:03 IST
ಫಾಲೋ ಮಾಡಿ
Comments

ಕಠ್ಮಂಡು: ನೇಪಾಳದಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಂಟಾದ ಪ್ರವಾಹ ಸ್ಥಿತಿಯಿಂದಾಗಿ ಮೃತಪಟ್ಟವರ ಸಂಖ್ಯೆ 112ಕ್ಕೆ ಏರಿಕೆಯಾಗಿದ್ದು, ಇನ್ನು 68 ಮಂದಿ ಕಾಣೆಯಾಗಿದ್ದಾರೆ. 

195ಕ್ಕೂ ಹೆಚ್ಚು ಮನೆ ಹಾಗೂ 8 ಸೇತುವೆಗಳಿಗೆ ಹಾನಿಯಾಗಿವೆ. 3 ಸಾವಿರಕ್ಕೂ ಹೆಚ್ಚು ಜನರನ್ನು ಭದ್ರತಾ ಪಡೆ ಅಧಿಕಾರಿಗಳು ರಕ್ಷಿಸಿದ್ದಾರೆ.

‘ಕಠ್ಮಂಡುವಿನಲ್ಲಿ ಈ ಪ್ರಮಾಣದ ಪ್ರವಾಹವನ್ನು ನಾನು ಹಿಂದೆಂದೂ ನೋಡಿಲ್ಲ’ ಎಂದು ಹವಾಮಾನ ಮತ್ತು ಪರಿಸರ ತಜ್ಞ ಅರುಣ್ ಭಕ್ತ ಶ್ರೇಷ್ಠ ಹೇಳಿದ್ದಾರೆ.

ಕಠ್ಮಂಡುವಿನ ಪ್ರಮುಖ ನದಿ ಭಾಗಮತಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಠ್ಮಂಡುವಿನಲ್ಲಿ 4 ಲಕ್ಷ ಜನಸಂಖ್ಯೆಯಿದೆ.

‘40-45 ವರ್ಷಗಳಲ್ಲಿ ಇಂತಹ ಭೀಕರ ಪ್ರವಾಹವನ್ನು ಕಂಡಿರಲಿಲ್ಲ. ಅಪಾರ ಪ್ರಮಾಣದ ಹಾನಿಯಾಗಿದೆ’ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT