<p><strong>ಕೊಲಂಬೊ</strong>: ಶ್ರೀಲಂಕಾದಲ್ಲಿ ಎಲ್ಟಿಟಿಇ ನಿರ್ನಾಮಗೊಳಿಸಿದ ಸೇನಾ ಕಾರ್ಯಾಚರಣೆಯ ರೂವಾರಿ ಮತ್ತು ಮಾಜಿ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಶರತ್ ಫೊನ್ಸೆಕಾ ಅವರು ಅಧ್ಯಕ್ಷೀಯ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಗುರುವಾರ ಔಪಚಾರಿಕವಾಗಿ ಘೋಷಿಸಿದರು.</p>.<p>ದ್ವೀಪ ರಾಷ್ಟ್ರದಲ್ಲಿ ಭ್ರಷ್ಟಾಚಾರ ಹತ್ತಿಕ್ಕುವ ಮತ್ತು ಆರ್ಥಿಕತೆಯನ್ನು ವೃದ್ಧಿಸುವ ಪ್ರತಿಜ್ಞೆಯೊಂದಿಗೆ ತಮ್ಮ ಉಮೇದುವಾರಿಕೆಯ ಮಾಹಿತಿಯನ್ನು ‘ಎಕ್ಸ್’ ಮೂಲಕ ಅವರು ಹಂಚಿಕೊಂಡಿದ್ದಾರೆ. </p>.<p>ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಬರುವ ಸೆಪ್ಟೆಂಬರ್ 17 ಮತ್ತು ಅಕ್ಟೋಬರ್ 16ರ ನಡುವೆ ನಡೆಯಲಿದೆ. ಚುನಾವಣೆಯ ದಿನಾಂಕವನ್ನು ಶುಕ್ರವಾರ ಪ್ರಕಟಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.</p>.<p>‘76 ವರ್ಷಗಳಿಂದ ಅಸಮರ್ಥ ರಾಜಕೀಯ ಗುಂಪು ನಮ್ಮನ್ನು ಮುನ್ನಡೆಸಿದ್ದು, ದೇಶವನ್ನು ದಿವಾಳಿತನಕ್ಕೆ ತಳ್ಳಿದೆ. ಶ್ರೀಲಂಕಾ ಬೆಳವಣಿಗೆ ಸಾಧಿಸಲು ಭ್ರಷ್ಟಾಚಾರವನ್ನು ಹತ್ತಿಕ್ಕಬೇಕಾಗಿದೆ. ಆದಾಯ, ಉತ್ಪಾದನೆ ಹೆಚ್ಚಿಸಲು ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ಇದಕ್ಕಾಗಿ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ’ ಎಂದು ಫೊನ್ಸೆಕಾ ಹೇಳಿದ್ದಾರೆ.</p>.<p>ಪ್ರತ್ಯೇಕ ತಮಿಳು ದೇಶ ರಚಿಸಲು ಎಲ್ಟಿಟಿಇಯ ಪ್ರತ್ಯೇಕತಾವಾದಿಗಳು ನಡೆಸಿದ್ದ ಹೋರಾಟವನ್ನು ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಫೊನ್ಸೆಕಾ, 2010ರ ಅಧ್ಯಕ್ಷೀಯ ಚುನಾವಣೆಯಲ್ಲಿ ಮಹಿಂದಾ ರಾಜಪಕ್ಸೆ ವಿರುದ್ಧ ಸ್ಪರ್ಧಿಸಿ, ಸೋತಿದ್ದರು.</p>.<p>ಹಾಲಿ ನ್ಯಾಯ ಸಚಿವ ವಿಜಯದಾಸ ರಾಜಪಕ್ಷೆ ಕೂಡ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಘೋಷಿಸಿ, ‘ರಾಷ್ಟ್ರದ ಭವಿಷ್ಯಕ್ಕೆ ಈ ಚುನಾವಣೆ ನಿರ್ಣಾಯಕವಾಗಲಿದೆ’ ಎಂದಿದ್ದಾರೆ.</p>.<p>ಪ್ರಮುಖ ವಿರೋಧ ಪಕ್ಷದ ನಾಯಕರಾದ ಸಜಿತ್ ಪ್ರೇಮದಾಸ ಮತ್ತು ಮಾರ್ಕ್ಸ್ವಾದಿ ಜೆವಿಪಿ ನಾಯಕ ಅನುರ ಕುಮಾರ ಡಿಸಾನಾಯಕೆ ಸಹ ತಮ್ಮ ಸ್ಪರ್ಧೆಯನ್ನು ಈಗಾಗಲೇ ಪ್ರಕಟಿಸಿದ್ದಾರೆ. ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರೂ ಮರು ಆಯ್ಕೆ ಬಯಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಶ್ರೀಲಂಕಾದಲ್ಲಿ ಎಲ್ಟಿಟಿಇ ನಿರ್ನಾಮಗೊಳಿಸಿದ ಸೇನಾ ಕಾರ್ಯಾಚರಣೆಯ ರೂವಾರಿ ಮತ್ತು ಮಾಜಿ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಶರತ್ ಫೊನ್ಸೆಕಾ ಅವರು ಅಧ್ಯಕ್ಷೀಯ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಗುರುವಾರ ಔಪಚಾರಿಕವಾಗಿ ಘೋಷಿಸಿದರು.</p>.<p>ದ್ವೀಪ ರಾಷ್ಟ್ರದಲ್ಲಿ ಭ್ರಷ್ಟಾಚಾರ ಹತ್ತಿಕ್ಕುವ ಮತ್ತು ಆರ್ಥಿಕತೆಯನ್ನು ವೃದ್ಧಿಸುವ ಪ್ರತಿಜ್ಞೆಯೊಂದಿಗೆ ತಮ್ಮ ಉಮೇದುವಾರಿಕೆಯ ಮಾಹಿತಿಯನ್ನು ‘ಎಕ್ಸ್’ ಮೂಲಕ ಅವರು ಹಂಚಿಕೊಂಡಿದ್ದಾರೆ. </p>.<p>ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ ಬರುವ ಸೆಪ್ಟೆಂಬರ್ 17 ಮತ್ತು ಅಕ್ಟೋಬರ್ 16ರ ನಡುವೆ ನಡೆಯಲಿದೆ. ಚುನಾವಣೆಯ ದಿನಾಂಕವನ್ನು ಶುಕ್ರವಾರ ಪ್ರಕಟಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.</p>.<p>‘76 ವರ್ಷಗಳಿಂದ ಅಸಮರ್ಥ ರಾಜಕೀಯ ಗುಂಪು ನಮ್ಮನ್ನು ಮುನ್ನಡೆಸಿದ್ದು, ದೇಶವನ್ನು ದಿವಾಳಿತನಕ್ಕೆ ತಳ್ಳಿದೆ. ಶ್ರೀಲಂಕಾ ಬೆಳವಣಿಗೆ ಸಾಧಿಸಲು ಭ್ರಷ್ಟಾಚಾರವನ್ನು ಹತ್ತಿಕ್ಕಬೇಕಾಗಿದೆ. ಆದಾಯ, ಉತ್ಪಾದನೆ ಹೆಚ್ಚಿಸಲು ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ಇದಕ್ಕಾಗಿ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ’ ಎಂದು ಫೊನ್ಸೆಕಾ ಹೇಳಿದ್ದಾರೆ.</p>.<p>ಪ್ರತ್ಯೇಕ ತಮಿಳು ದೇಶ ರಚಿಸಲು ಎಲ್ಟಿಟಿಇಯ ಪ್ರತ್ಯೇಕತಾವಾದಿಗಳು ನಡೆಸಿದ್ದ ಹೋರಾಟವನ್ನು ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಫೊನ್ಸೆಕಾ, 2010ರ ಅಧ್ಯಕ್ಷೀಯ ಚುನಾವಣೆಯಲ್ಲಿ ಮಹಿಂದಾ ರಾಜಪಕ್ಸೆ ವಿರುದ್ಧ ಸ್ಪರ್ಧಿಸಿ, ಸೋತಿದ್ದರು.</p>.<p>ಹಾಲಿ ನ್ಯಾಯ ಸಚಿವ ವಿಜಯದಾಸ ರಾಜಪಕ್ಷೆ ಕೂಡ ಚುನಾವಣೆಗೆ ತಮ್ಮ ಉಮೇದುವಾರಿಕೆಯನ್ನು ಘೋಷಿಸಿ, ‘ರಾಷ್ಟ್ರದ ಭವಿಷ್ಯಕ್ಕೆ ಈ ಚುನಾವಣೆ ನಿರ್ಣಾಯಕವಾಗಲಿದೆ’ ಎಂದಿದ್ದಾರೆ.</p>.<p>ಪ್ರಮುಖ ವಿರೋಧ ಪಕ್ಷದ ನಾಯಕರಾದ ಸಜಿತ್ ಪ್ರೇಮದಾಸ ಮತ್ತು ಮಾರ್ಕ್ಸ್ವಾದಿ ಜೆವಿಪಿ ನಾಯಕ ಅನುರ ಕುಮಾರ ಡಿಸಾನಾಯಕೆ ಸಹ ತಮ್ಮ ಸ್ಪರ್ಧೆಯನ್ನು ಈಗಾಗಲೇ ಪ್ರಕಟಿಸಿದ್ದಾರೆ. ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರೂ ಮರು ಆಯ್ಕೆ ಬಯಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>