<p>ಉತ್ತರಪ್ರದೇಶ: ‘ವಂದೇ ಮಾತರಂ’, ‘ಸರಸ್ವತಿ ವಂದನೆ’ ತಂದ ವಿವಾದ</p><p>ಲಖನೌ, ನ. 19– ಉತ್ತರಪ್ರದೇಶದ ಎಲ್ಲ 1.5 ಲಕ್ಷ ಪ್ರಾಥಮಿಕ ಶಾಲೆಗಳಲ್ಲಿ ‘ವಂದೇ ಮಾತರಂ’ ಮತ್ತು ‘ಸರಸ್ವತಿ ವಂದನೆ’ ಕಡ್ಡಾಯವಾಗಿ ಹಾಡುವಂತೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಬಲು ದೊಡ್ಡ ವಿವಾದವನ್ನು ಹುಟ್ಟುಹಾಕಿದೆ.</p><p>ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲ ಮೂರು ಕೋಟಿ ವಿದ್ಯಾರ್ಥಿಗಳು ಪ್ರತಿದಿನ ಕಡ್ಡಾಯವಾಗಿ ‘ವಂದೇ ಮಾತರಂ’ ಮತ್ತು ‘ಸರಸ್ವತಿ ವಂದನೆ’ ಹಾಡಬೇಕು ಎಂದು ಕಲ್ಯಾಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.</p><p>ರಾಜಕೀಯ ತಾಣವಾಗಿರುವ ಜಿಂದಾಲ್</p><p>ಬೆಂಗಳೂರು, ನ. 19– ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ವಿಶ್ರಾಂತಿ ಪಡೆಯುವ ಉದ್ದೇಶದಿಂದ ದಾಖಲಾಗಿರುವ ನಗರದ ಹೊರವಲಯದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರ ಈಗ ರಾಜಕೀಯ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.</p><p>ಮುಖ್ಯಮಂತ್ರಿಯವರ ಆರೋಗ್ಯ ವಿಚಾರಿಸಲು ಕಳೆದ ಎರಡು–ಮೂರು ದಿನಗಳಿಂದ ಸಚಿವರು–ಶಾಸಕರು ಒಬ್ಬರ ನಂತರ ಒಬ್ಬರು ‘ಜಿಂದಾಲ್’ಗೆ ಎಡತಾಕು ತ್ತಿದ್ದಾರೆ. ಪಟೇಲ್ ಅವರ ಆರೋಗ್ಯ ವಿಚಾರಿಸುವುದರ ಜೊತೆಗೆ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅಲ್ಲಿ ಚರ್ಚೆ<br>ನಡೆಯುತ್ತಿರುವುದೇ ವಿಶೇಷವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉತ್ತರಪ್ರದೇಶ: ‘ವಂದೇ ಮಾತರಂ’, ‘ಸರಸ್ವತಿ ವಂದನೆ’ ತಂದ ವಿವಾದ</p><p>ಲಖನೌ, ನ. 19– ಉತ್ತರಪ್ರದೇಶದ ಎಲ್ಲ 1.5 ಲಕ್ಷ ಪ್ರಾಥಮಿಕ ಶಾಲೆಗಳಲ್ಲಿ ‘ವಂದೇ ಮಾತರಂ’ ಮತ್ತು ‘ಸರಸ್ವತಿ ವಂದನೆ’ ಕಡ್ಡಾಯವಾಗಿ ಹಾಡುವಂತೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಬಲು ದೊಡ್ಡ ವಿವಾದವನ್ನು ಹುಟ್ಟುಹಾಕಿದೆ.</p><p>ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲ ಮೂರು ಕೋಟಿ ವಿದ್ಯಾರ್ಥಿಗಳು ಪ್ರತಿದಿನ ಕಡ್ಡಾಯವಾಗಿ ‘ವಂದೇ ಮಾತರಂ’ ಮತ್ತು ‘ಸರಸ್ವತಿ ವಂದನೆ’ ಹಾಡಬೇಕು ಎಂದು ಕಲ್ಯಾಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.</p><p>ರಾಜಕೀಯ ತಾಣವಾಗಿರುವ ಜಿಂದಾಲ್</p><p>ಬೆಂಗಳೂರು, ನ. 19– ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರು ವಿಶ್ರಾಂತಿ ಪಡೆಯುವ ಉದ್ದೇಶದಿಂದ ದಾಖಲಾಗಿರುವ ನಗರದ ಹೊರವಲಯದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರ ಈಗ ರಾಜಕೀಯ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.</p><p>ಮುಖ್ಯಮಂತ್ರಿಯವರ ಆರೋಗ್ಯ ವಿಚಾರಿಸಲು ಕಳೆದ ಎರಡು–ಮೂರು ದಿನಗಳಿಂದ ಸಚಿವರು–ಶಾಸಕರು ಒಬ್ಬರ ನಂತರ ಒಬ್ಬರು ‘ಜಿಂದಾಲ್’ಗೆ ಎಡತಾಕು ತ್ತಿದ್ದಾರೆ. ಪಟೇಲ್ ಅವರ ಆರೋಗ್ಯ ವಿಚಾರಿಸುವುದರ ಜೊತೆಗೆ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅಲ್ಲಿ ಚರ್ಚೆ<br>ನಡೆಯುತ್ತಿರುವುದೇ ವಿಶೇಷವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>