<p><strong>ಒರಿಸ್ಸಾ: ಕ್ರೈಸ್ತ ಧರ್ಮ ಪ್ರಚಾರಕ ಇಬ್ಬರು ಮಕ್ಕಳ ಸಜೀವ ದಹನ</strong></p><p><strong>ಮನೋಹರಪುರ (ಒರಿಸ್ಸಾ), ಜ. 23 (ಪಿಟಿಐ): </strong>ಒರಿಸ್ಸಾದ ಕೇವಂಜಾರ್ ಜಿಲ್ಲೆಯ ಬುಡಕಟ್ಟು ಹಳ್ಳಿಯಾದ ಇಲ್ಲಿ ನಿನ್ನೆ ಮಧ್ಯರಾತ್ರಿ ನಂತರ ಆಸ್ಟ್ರೇಲಿಯಾದ ಒಬ್ಬ ಕ್ರೈಸ್ತ ಧರ್ಮ ಪ್ರಚಾರಕ ಮತ್ತು ಅವರ ಇಬ್ಬರು ಮಕ್ಕಳನ್ನು ಬಜರಂಗದಳ ಕಾರ್ಯಕರ್ತರು ಜೀವಂತವಾಗಿ ಸುಟ್ಟುಹಾಕಿದ ಆಘಾತಕಾರಿ ಘಟನೆ ನಡೆದಿದೆ.</p><p>ಈ ಹಳ್ಳಿಯಲ್ಲಿ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ಆಪಾದಿಸಿ ಈ ಕೃತ್ಯ ಎಸಗಲಾಗಿದೆ. ಬಿಲ್ಲು ಮತ್ತು ಬಾಣಗಳನ್ನು ಹಿಡಿದಿದ್ದ ಕಾರ್ಯಕರ್ತರು ಜೀಪಿನೊಳಗೆ ನಿದ್ರಿಸುತ್ತಿದ್ದ 58 ವರ್ಷ ವಯಸ್ಸಿನ ಗ್ರಹಾಂ ಸ್ಟಿವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರಾದ ಫಿಲಿಪ್ಸ್ (9) ಮತ್ತು ತಿಮೋಥಿ (7) ಅವರನ್ನು ಜೀವಂತವಾಗಿ ದಹಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>***</p><p><strong>ರಾಜೀನಾಮೆ ಕೊಟ್ಟಿದ್ದು ನಿಜ: ಸಚಿವ</strong></p><p><strong>ಬೆಂಗಳೂರು, ಜ. 23:</strong> ಗ್ರಾಮ ಪಂಚಾಯ್ತಿಗಳ ಚುನಾವಣೆ ಮುಂದೂಡಿದುದನ್ನು ವಿರೋಧಿಸಿ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ನಿಜವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಂ.ಪಿ. ಪ್ರಕಾಶ್ ಇಂದು ಇಲ್ಲಿ ಹೇಳಿದರು.</p><p>ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆಯಲ್ಲಿ, ಚುನಾವಣೆಯನ್ನು ಮುಂದೂಡುವ ಬಗ್ಗೆ ಪ್ರಸ್ತಾಪ ಬಂದಾಗ ತಾವು ಅದನ್ನು ಪ್ರಬಲವಾಗಿ ವಿರೋಧಿಸಿದುದಾಗಿ ಪತ್ರಕರ್ತರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒರಿಸ್ಸಾ: ಕ್ರೈಸ್ತ ಧರ್ಮ ಪ್ರಚಾರಕ ಇಬ್ಬರು ಮಕ್ಕಳ ಸಜೀವ ದಹನ</strong></p><p><strong>ಮನೋಹರಪುರ (ಒರಿಸ್ಸಾ), ಜ. 23 (ಪಿಟಿಐ): </strong>ಒರಿಸ್ಸಾದ ಕೇವಂಜಾರ್ ಜಿಲ್ಲೆಯ ಬುಡಕಟ್ಟು ಹಳ್ಳಿಯಾದ ಇಲ್ಲಿ ನಿನ್ನೆ ಮಧ್ಯರಾತ್ರಿ ನಂತರ ಆಸ್ಟ್ರೇಲಿಯಾದ ಒಬ್ಬ ಕ್ರೈಸ್ತ ಧರ್ಮ ಪ್ರಚಾರಕ ಮತ್ತು ಅವರ ಇಬ್ಬರು ಮಕ್ಕಳನ್ನು ಬಜರಂಗದಳ ಕಾರ್ಯಕರ್ತರು ಜೀವಂತವಾಗಿ ಸುಟ್ಟುಹಾಕಿದ ಆಘಾತಕಾರಿ ಘಟನೆ ನಡೆದಿದೆ.</p><p>ಈ ಹಳ್ಳಿಯಲ್ಲಿ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ಆಪಾದಿಸಿ ಈ ಕೃತ್ಯ ಎಸಗಲಾಗಿದೆ. ಬಿಲ್ಲು ಮತ್ತು ಬಾಣಗಳನ್ನು ಹಿಡಿದಿದ್ದ ಕಾರ್ಯಕರ್ತರು ಜೀಪಿನೊಳಗೆ ನಿದ್ರಿಸುತ್ತಿದ್ದ 58 ವರ್ಷ ವಯಸ್ಸಿನ ಗ್ರಹಾಂ ಸ್ಟಿವರ್ಟ್ ಸ್ಟೇನ್ಸ್ ಮತ್ತು ಅವರ ಇಬ್ಬರು ಪುತ್ರರಾದ ಫಿಲಿಪ್ಸ್ (9) ಮತ್ತು ತಿಮೋಥಿ (7) ಅವರನ್ನು ಜೀವಂತವಾಗಿ ದಹಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>***</p><p><strong>ರಾಜೀನಾಮೆ ಕೊಟ್ಟಿದ್ದು ನಿಜ: ಸಚಿವ</strong></p><p><strong>ಬೆಂಗಳೂರು, ಜ. 23:</strong> ಗ್ರಾಮ ಪಂಚಾಯ್ತಿಗಳ ಚುನಾವಣೆ ಮುಂದೂಡಿದುದನ್ನು ವಿರೋಧಿಸಿ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ನಿಜವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಂ.ಪಿ. ಪ್ರಕಾಶ್ ಇಂದು ಇಲ್ಲಿ ಹೇಳಿದರು.</p><p>ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆಯಲ್ಲಿ, ಚುನಾವಣೆಯನ್ನು ಮುಂದೂಡುವ ಬಗ್ಗೆ ಪ್ರಸ್ತಾಪ ಬಂದಾಗ ತಾವು ಅದನ್ನು ಪ್ರಬಲವಾಗಿ ವಿರೋಧಿಸಿದುದಾಗಿ ಪತ್ರಕರ್ತರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>