<p>ಬುಧವಾರ 20–1–1999</p><p>ಪಟೇಲ್ ಮಧ್ಯಸ್ಥಿಕೆ – ಶಂಕರ್ ಪದಚ್ಯುತಿ ಬಿಕ್ಕಟ್ಟು ಇತ್ಯರ್ಥ </p>.<p>ಬೆಂಗಳೂರು, ಜ. 19 - ರಾಜ್ಯ ಜನತಾ ದಳದ ಅಧ್ಯಕ್ಷ ಸ್ಥಾನದಿಂದ ಬಿ.ಎಲ್.ಶಂಕರ್ ಅವರನ್ನು ಪದಚ್ಯುತಿಗೊಳಿಸಿದ ವಿಧಾನದ ಬಗ್ಗೆ ಹಿರಿಯ ಒಕ್ಕಲಿಗ ಸಚಿವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದಲ್ಲಿ ಉದ್ಭವಿಸಿದ್ದ ಹೊಸ ಬಿಕ್ಕಟ್ಟು ಇಂದು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ಮಧ್ಯಸ್ಥಿಕೆಯಿಂದಾಗಿ ಸದ್ಯಕ್ಕೆ ಬಗೆಹರಿದಿದೆ.</p>.<p>ಶಂಕರ್ ಪದಚ್ಯುತಿ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಹಿರಿಯ ಒಕ್ಕಲಿಗ ಸಚಿವರು ಕದನ ವಿರಾಮ ಘೋಷಿಸಿ ಪಕ್ಷದ ಬಿಕ್ಕಟ್ಟು ಪರಿಹರಿಸುವ ಸಂಬಂಧ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಅವರು ಪ್ರಕಟಿಸಿರುವ ತೀರ್ಮಾನಕ್ಕೆ ಬದ್ಧರಾಗಿರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಶಂಕರ್ ಅವರಿಗೆ ಸೂಕ್ತ 'ನ್ಯಾಯ ದೊರಕಿಸುವ ಅಧಿಕಾರವನ್ನು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರಿಗೆ ವಹಿಸಿರುವ ಹಿರಿಯ ಒಕ್ಕಲಿಗ ಸಚಿವರು ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜನತಾದಳದ ಅಧ್ಯಕ್ಷರಾಗಿ ನಾಳೆ ಅಧಿಕಾರ ವಹಿಸಿಕೊಳ್ಳುವ ಸಮಾರಂಭದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದಾರೆ. </p>.<p>ಕ್ರಿಕೆಟ್: ‘ಶಿವಸೇನೆ ಬೆದರಿಕೆ ಗಂಭೀರವಲ್ಲ’ </p>.<p>ಮುಂಬೈ, ಜ. 19 - ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಚೇರಿ ಮೇಲೆ ದಾಳಿ ನಡೆಸಿದ ಯಾರೂ ರಕ್ಷಣೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಹರಾಷ್ಟ್ರದ ಉಪ ಮುಖ್ಯಮಂತ್ರಿ ಗೋಪಿನಾಥ್ ಮುಂಡೆ ಅವರು ಇಂದು ಇಲ್ಲಿ ಸ್ಪಷ್ಟಪಡಿಸಿದರು.</p>.<p>ಆದರೆ ಪ್ರಕರಣ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ‘ದುಷ್ಕರ್ಮಿಗಳ ವಿರುದ್ಧ ಕಾನೂನು ತನ್ನದೇ ಆದ ಕ್ರಮವನ್ನು ಕೈಗೊಳ್ಳಲಿದೆ' ಎಂದು ಅವರು ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬುಧವಾರ 20–1–1999</p><p>ಪಟೇಲ್ ಮಧ್ಯಸ್ಥಿಕೆ – ಶಂಕರ್ ಪದಚ್ಯುತಿ ಬಿಕ್ಕಟ್ಟು ಇತ್ಯರ್ಥ </p>.<p>ಬೆಂಗಳೂರು, ಜ. 19 - ರಾಜ್ಯ ಜನತಾ ದಳದ ಅಧ್ಯಕ್ಷ ಸ್ಥಾನದಿಂದ ಬಿ.ಎಲ್.ಶಂಕರ್ ಅವರನ್ನು ಪದಚ್ಯುತಿಗೊಳಿಸಿದ ವಿಧಾನದ ಬಗ್ಗೆ ಹಿರಿಯ ಒಕ್ಕಲಿಗ ಸಚಿವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದಲ್ಲಿ ಉದ್ಭವಿಸಿದ್ದ ಹೊಸ ಬಿಕ್ಕಟ್ಟು ಇಂದು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ ಮಧ್ಯಸ್ಥಿಕೆಯಿಂದಾಗಿ ಸದ್ಯಕ್ಕೆ ಬಗೆಹರಿದಿದೆ.</p>.<p>ಶಂಕರ್ ಪದಚ್ಯುತಿ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಹಿರಿಯ ಒಕ್ಕಲಿಗ ಸಚಿವರು ಕದನ ವಿರಾಮ ಘೋಷಿಸಿ ಪಕ್ಷದ ಬಿಕ್ಕಟ್ಟು ಪರಿಹರಿಸುವ ಸಂಬಂಧ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಅವರು ಪ್ರಕಟಿಸಿರುವ ತೀರ್ಮಾನಕ್ಕೆ ಬದ್ಧರಾಗಿರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಶಂಕರ್ ಅವರಿಗೆ ಸೂಕ್ತ 'ನ್ಯಾಯ ದೊರಕಿಸುವ ಅಧಿಕಾರವನ್ನು ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರಿಗೆ ವಹಿಸಿರುವ ಹಿರಿಯ ಒಕ್ಕಲಿಗ ಸಚಿವರು ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜನತಾದಳದ ಅಧ್ಯಕ್ಷರಾಗಿ ನಾಳೆ ಅಧಿಕಾರ ವಹಿಸಿಕೊಳ್ಳುವ ಸಮಾರಂಭದಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಿದ್ದಾರೆ. </p>.<p>ಕ್ರಿಕೆಟ್: ‘ಶಿವಸೇನೆ ಬೆದರಿಕೆ ಗಂಭೀರವಲ್ಲ’ </p>.<p>ಮುಂಬೈ, ಜ. 19 - ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಚೇರಿ ಮೇಲೆ ದಾಳಿ ನಡೆಸಿದ ಯಾರೂ ರಕ್ಷಣೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಹರಾಷ್ಟ್ರದ ಉಪ ಮುಖ್ಯಮಂತ್ರಿ ಗೋಪಿನಾಥ್ ಮುಂಡೆ ಅವರು ಇಂದು ಇಲ್ಲಿ ಸ್ಪಷ್ಟಪಡಿಸಿದರು.</p>.<p>ಆದರೆ ಪ್ರಕರಣ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ‘ದುಷ್ಕರ್ಮಿಗಳ ವಿರುದ್ಧ ಕಾನೂನು ತನ್ನದೇ ಆದ ಕ್ರಮವನ್ನು ಕೈಗೊಳ್ಳಲಿದೆ' ಎಂದು ಅವರು ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>