<p><strong>ನವದೆಹಲಿ,</strong> ಪೇಟೆಂಟ್ ಮಸೂದೆ ಬಗ್ಗೆ ಕಾನೂನು ಆಯೋಗವು ಮಾಡಿರುವ ಶಿಫಾರಸು ಏನೆಂದು ಸದನದ ಗಮನಕ್ಕೆ ತರದೇ ಹೋದುದನ್ನು ಪ್ರತಿಭಟಿಸಿ ಲೋಕಸಭೆಯಲ್ಲಿ ಇಂದು ಕಾಂಗ್ರೆಸ್ಸೇತರ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. </p><p>ಕಾನೂನು ಆಯೋಗವು ತನ್ನ ವರದಿಯಲ್ಲಿ ಪೇಟೆಂಟ್ ಮಸೂದೆಗೆ ಕೆಲವು ತಿದ್ದುಪಡಿ<br>ಗಳನ್ನು ಸಲಹೆ ಮಾಡಿದ್ದರೂ, ಅದನ್ನು ಲೋಕಸಭೆಯ ಗಮನಕ್ಕೆ ತರದೆ ಪೇಟೆಂಟ್ ಮಸೂದೆಗೆ ಒಪ್ಪಿಗೆ ಪಡೆಯುವ ಮೂಲಕ ಸರ್ಕಾರ ಈ ಸದನಕ್ಕೆ ಅಗೌರವ ಸೂಚಿಸಿದೆ ಎಂದು ಕಾಂಗ್ರೆಸ್, ಸಿಪಿಐ (ಎಂ), ಸಿಪಿಐ, ರಾಷ್ಟ್ರೀಯ ಜನತಾದಳ, ಸಮಾಜವಾದಿ ಪಕ್ಷ ಮತ್ತು ಜನತಾದಳದ ಸದಸ್ಯರು ತೀವ್ರವಾಗಿ ಆಕ್ಷೇಪಿಸಿದರು. </p><p>ಶೂನ್ಯ ವೇಳೆಯಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಆಳುವ ಬಿಜೆಪಿಯ ಮಿತ್ರಪಕ್ಷವಾದ ಸಮತಾ ಪಕ್ಷ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದವು. </p> <p><strong>ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿಗೆ ಸ್ಥಳಾಂತರ</strong></p><p><strong>ನವದೆಹಲಿ,</strong> ಬೆಂಗಳೂರಿನಲ್ಲಿ ಆರಂಭಿಸಲಾಗಿರುವ ನೈರುತ್ಯ ರೈಲ್ವೆ ವಲಯ ಕೇಂದ್ರ ಸ್ಥಾನವನ್ನು ಹುಬ್ಬಳ್ಳಿಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ,</strong> ಪೇಟೆಂಟ್ ಮಸೂದೆ ಬಗ್ಗೆ ಕಾನೂನು ಆಯೋಗವು ಮಾಡಿರುವ ಶಿಫಾರಸು ಏನೆಂದು ಸದನದ ಗಮನಕ್ಕೆ ತರದೇ ಹೋದುದನ್ನು ಪ್ರತಿಭಟಿಸಿ ಲೋಕಸಭೆಯಲ್ಲಿ ಇಂದು ಕಾಂಗ್ರೆಸ್ಸೇತರ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು. </p><p>ಕಾನೂನು ಆಯೋಗವು ತನ್ನ ವರದಿಯಲ್ಲಿ ಪೇಟೆಂಟ್ ಮಸೂದೆಗೆ ಕೆಲವು ತಿದ್ದುಪಡಿ<br>ಗಳನ್ನು ಸಲಹೆ ಮಾಡಿದ್ದರೂ, ಅದನ್ನು ಲೋಕಸಭೆಯ ಗಮನಕ್ಕೆ ತರದೆ ಪೇಟೆಂಟ್ ಮಸೂದೆಗೆ ಒಪ್ಪಿಗೆ ಪಡೆಯುವ ಮೂಲಕ ಸರ್ಕಾರ ಈ ಸದನಕ್ಕೆ ಅಗೌರವ ಸೂಚಿಸಿದೆ ಎಂದು ಕಾಂಗ್ರೆಸ್, ಸಿಪಿಐ (ಎಂ), ಸಿಪಿಐ, ರಾಷ್ಟ್ರೀಯ ಜನತಾದಳ, ಸಮಾಜವಾದಿ ಪಕ್ಷ ಮತ್ತು ಜನತಾದಳದ ಸದಸ್ಯರು ತೀವ್ರವಾಗಿ ಆಕ್ಷೇಪಿಸಿದರು. </p><p>ಶೂನ್ಯ ವೇಳೆಯಲ್ಲಿ ಮಾಜಿ ಪ್ರಧಾನಿ ಚಂದ್ರಶೇಖರ್ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಆಳುವ ಬಿಜೆಪಿಯ ಮಿತ್ರಪಕ್ಷವಾದ ಸಮತಾ ಪಕ್ಷ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರದ ಕ್ರಮವನ್ನು ಟೀಕಿಸಿದವು. </p> <p><strong>ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿಗೆ ಸ್ಥಳಾಂತರ</strong></p><p><strong>ನವದೆಹಲಿ,</strong> ಬೆಂಗಳೂರಿನಲ್ಲಿ ಆರಂಭಿಸಲಾಗಿರುವ ನೈರುತ್ಯ ರೈಲ್ವೆ ವಲಯ ಕೇಂದ್ರ ಸ್ಥಾನವನ್ನು ಹುಬ್ಬಳ್ಳಿಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>