<p><strong>ಮಾನವೀಯತೆ ಮೆರೆದ ಸರ್ಕಾರಿ ವೈದ್ಯರು</strong></p><p><strong>ಚಿಕ್ಕಮಗಳೂರು, ಡಿ. 26 –</strong> ಮುಷ್ಕರದ ಮಧ್ಯೆಯೂ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಕರ್ತವ್ಯಪ್ರಜ್ಞೆ ತೋರಿ ಮೂರು ಜೀವಗಳನ್ನು ಉಳಿಸಿ ಮಾನವೀಯತೆ ಮೆರೆದ ಘಟನೆ ಇಂದು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.</p><p>ಆಲ್ದೂರಿನಲ್ಲಿ ವ್ಯಾನೊಂದು ಅಪಘಾತಕ್ಕೀಡಾಗಿ ಒಬ್ಬ ಸ್ಥಳದಲ್ಲೇ ಸತ್ತು ಇತರ 25ಕ್ಕೂ ಹೆಚ್ಚು ಜನರು ಗಾಯಗೊಂಡರು. ಈ ಪೈಕಿ ನಾಲ್ಕೈದು ಮಂದಿಗೆ ಗಂಭೀರ ಗಾಯಗಳಾದವು. ಆಲ್ದೂರು ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಹಾಗೂ ಸಿಬ್ಬಂದಿ ಮುಷ್ಕರದ ಮಧ್ಯೆಯೂ ಸಕಾಲದಲ್ಲಿ ಚಿಕಿತ್ಸೆ ನೀಡಿ ಮೂವರ ಜೀವ ಉಳಿಸಿದರು.</p><p><strong>ಉದ್ಯಮಿಗಳ ಕೈಗೆ ಆರ್ಥಿಕ ನೀತಿ: ದೇವೇಗೌಡ ಗೇಲಿ</strong></p><p><strong>ಬೆಂಗಳೂರು, ಡಿ. 26</strong> – ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳನ್ನು ಇಂದು ಇಲ್ಲಿ ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ‘ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದಂತೆ ಹೊಸ ನೀತಿಗಳನ್ನು ರೂಪಿಸುವಾಗ ಸರ್ಕಾರ<br>ಅರ್ಥಶಾಸ್ತ್ರಜ್ಞರ ಸಲಹೆ ಪಡೆಯುವುದರ ಬದಲು ಕೈಗಾರಿಕೋದ್ಯಮಿಗಳ ಸಲಹೆ ಪಡೆಯುತ್ತಿದೆ’ ಎಂದು ಆರೋಪಿಸಿದರು.</p><p>‘ನಾನು ಪ್ರಧಾನಿಯಾಗಿದ್ದಾಗ ಜಾರಿಗೆ ತಂದಿದ್ದ ಬಡವರ ಪರವಾದ ಹಲವಾರು ಕಾರ್ಯಕ್ರಮಗಳನ್ನು ಈಗಿನ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರದ್ದುಗೊಳಿಸಿದೆ; ಇದು ದೇಶದಲ್ಲಿ ಹಣದುಬ್ಬರಕ್ಕೆ ಕಾರಣವಾಗಿದೆ; ಅಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನವೀಯತೆ ಮೆರೆದ ಸರ್ಕಾರಿ ವೈದ್ಯರು</strong></p><p><strong>ಚಿಕ್ಕಮಗಳೂರು, ಡಿ. 26 –</strong> ಮುಷ್ಕರದ ಮಧ್ಯೆಯೂ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಕರ್ತವ್ಯಪ್ರಜ್ಞೆ ತೋರಿ ಮೂರು ಜೀವಗಳನ್ನು ಉಳಿಸಿ ಮಾನವೀಯತೆ ಮೆರೆದ ಘಟನೆ ಇಂದು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.</p><p>ಆಲ್ದೂರಿನಲ್ಲಿ ವ್ಯಾನೊಂದು ಅಪಘಾತಕ್ಕೀಡಾಗಿ ಒಬ್ಬ ಸ್ಥಳದಲ್ಲೇ ಸತ್ತು ಇತರ 25ಕ್ಕೂ ಹೆಚ್ಚು ಜನರು ಗಾಯಗೊಂಡರು. ಈ ಪೈಕಿ ನಾಲ್ಕೈದು ಮಂದಿಗೆ ಗಂಭೀರ ಗಾಯಗಳಾದವು. ಆಲ್ದೂರು ಪೊಲೀಸರು ಹಾಗೂ ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಹಾಗೂ ಸಿಬ್ಬಂದಿ ಮುಷ್ಕರದ ಮಧ್ಯೆಯೂ ಸಕಾಲದಲ್ಲಿ ಚಿಕಿತ್ಸೆ ನೀಡಿ ಮೂವರ ಜೀವ ಉಳಿಸಿದರು.</p><p><strong>ಉದ್ಯಮಿಗಳ ಕೈಗೆ ಆರ್ಥಿಕ ನೀತಿ: ದೇವೇಗೌಡ ಗೇಲಿ</strong></p><p><strong>ಬೆಂಗಳೂರು, ಡಿ. 26</strong> – ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳನ್ನು ಇಂದು ಇಲ್ಲಿ ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ‘ಆರ್ಥಿಕ ವಿಚಾರಗಳಿಗೆ ಸಂಬಂಧಿಸಿದಂತೆ ಹೊಸ ನೀತಿಗಳನ್ನು ರೂಪಿಸುವಾಗ ಸರ್ಕಾರ<br>ಅರ್ಥಶಾಸ್ತ್ರಜ್ಞರ ಸಲಹೆ ಪಡೆಯುವುದರ ಬದಲು ಕೈಗಾರಿಕೋದ್ಯಮಿಗಳ ಸಲಹೆ ಪಡೆಯುತ್ತಿದೆ’ ಎಂದು ಆರೋಪಿಸಿದರು.</p><p>‘ನಾನು ಪ್ರಧಾನಿಯಾಗಿದ್ದಾಗ ಜಾರಿಗೆ ತಂದಿದ್ದ ಬಡವರ ಪರವಾದ ಹಲವಾರು ಕಾರ್ಯಕ್ರಮಗಳನ್ನು ಈಗಿನ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರದ್ದುಗೊಳಿಸಿದೆ; ಇದು ದೇಶದಲ್ಲಿ ಹಣದುಬ್ಬರಕ್ಕೆ ಕಾರಣವಾಗಿದೆ; ಅಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>