<p><strong>ನವದೆಹಲಿ, ಅ. 7–</strong> ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವು 290ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಸರಳ ಬಹುಮತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮುಂದಾಳುತನದ ಸರ್ಕಾರ ಬುಧವಾರ ಮತ್ತೆ ಅಧಿಕಾರಕ್ಕೆ ಬರುವುದು ಸ್ಪಷ್ಟವಾಗಿದೆ.</p><p>ಬಿಜೆಪಿಯ ನೂತನ ಲೋಕಸಭೆ ಸದಸ್ಯರು ಭಾನುವಾರ ಬೆಳಿಗ್ಗೆ ಸೇರಿ ನಂತರ ಮಧ್ಯಾಹ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ನೂತನ ಸಂಸದೀಯ ಪಕ್ಷದ ಸಭೆಯು ಪ್ರಧಾನಿ ವಾಜಪೇಯಿ ಅವರನ್ನು ವಿಧಿವತ್ತಾಗಿ ತನ್ನ ನಾಯಕನನ್ನಾಗಿ ಆಯ್ಕೆ ಮಾಡಲಿದೆ.</p><p><strong>ಕೃಷ್ಣ ಮುಖ್ಯಮಂತ್ರಿ: ಬಹುತೇಕ ಖಚಿತ</strong></p><p><strong>ಬೆಂಗಳೂರು, ಅ. 7–</strong> ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಸ್.ಎಂ. ಕೃಷ್ಣ ಅವರೇ ರಾಜ್ಯದ ನೂತನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ.</p><p>ವಿಧಾನಸಭೆಯ 224 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷವು 132 ಸ್ಥಾನಗಳನ್ನು ಗೆದ್ದು ನಿಚ್ಚಳ ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಚಾಲನೆ ದೊರೆತಿದೆ. ಮುಖ್ಯಮಂತ್ರಿ ಯಾರಾಗಬಹುದು ಎಂಬ ಬಗ್ಗೆ ಚರ್ಚೆ ಈಗಾಗಲೇ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, ಅ. 7–</strong> ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವು 290ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಸರಳ ಬಹುಮತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮುಂದಾಳುತನದ ಸರ್ಕಾರ ಬುಧವಾರ ಮತ್ತೆ ಅಧಿಕಾರಕ್ಕೆ ಬರುವುದು ಸ್ಪಷ್ಟವಾಗಿದೆ.</p><p>ಬಿಜೆಪಿಯ ನೂತನ ಲೋಕಸಭೆ ಸದಸ್ಯರು ಭಾನುವಾರ ಬೆಳಿಗ್ಗೆ ಸೇರಿ ನಂತರ ಮಧ್ಯಾಹ್ನ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ನೂತನ ಸಂಸದೀಯ ಪಕ್ಷದ ಸಭೆಯು ಪ್ರಧಾನಿ ವಾಜಪೇಯಿ ಅವರನ್ನು ವಿಧಿವತ್ತಾಗಿ ತನ್ನ ನಾಯಕನನ್ನಾಗಿ ಆಯ್ಕೆ ಮಾಡಲಿದೆ.</p><p><strong>ಕೃಷ್ಣ ಮುಖ್ಯಮಂತ್ರಿ: ಬಹುತೇಕ ಖಚಿತ</strong></p><p><strong>ಬೆಂಗಳೂರು, ಅ. 7–</strong> ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಸ್.ಎಂ. ಕೃಷ್ಣ ಅವರೇ ರಾಜ್ಯದ ನೂತನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ.</p><p>ವಿಧಾನಸಭೆಯ 224 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷವು 132 ಸ್ಥಾನಗಳನ್ನು ಗೆದ್ದು ನಿಚ್ಚಳ ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗೆ ಚಾಲನೆ ದೊರೆತಿದೆ. ಮುಖ್ಯಮಂತ್ರಿ ಯಾರಾಗಬಹುದು ಎಂಬ ಬಗ್ಗೆ ಚರ್ಚೆ ಈಗಾಗಲೇ ಆರಂಭವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>