<p><strong>ನವದೆಹಲಿ, ಮಾ. 5</strong>– ಕರ್ನಾಟಕಕ್ಕೆ ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ತೀರಾ ಅನ್ಯಾಯವಾಗಿದೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯದ ಸಂಸತ್ ಸದಸ್ಯರ ಸಭೆಯು, ಪ್ರಧಾನಿ ಮತ್ತು ರೈಲ್ವೆ ಸಚಿವರನ್ನು ಭೇಟಿಯಾಗಿ ಚರ್ಚಿಸಲು ಇಂದು ನಿರ್ಧರಿಸಿತು. </p><p>ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಲ್ಲಿನ ಕರ್ನಾಟಕ ಭವನದಲ್ಲಿ ಕರೆದಿದ್ದ ರಾಜ್ಯದ ಸಂಸತ್ ಸದಸ್ಯರ ಸಭೆಯಲ್ಲಿ, ರೈಲ್ವೆಯಲ್ಲಿ ರಾಜ್ಯಕ್ಕೆ ಈ ಬಾರಿ ತೀರಾ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತವಾಯಿತು. </p><p>ಆರಂಭದಲ್ಲಿ ಮಾತನಾಡಿದ ದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಬಸವರಾಜ ರಾಯಾರೆಡ್ಡಿ, ರಾಜ್ಯದಲ್ಲಿ ಈ ವರ್ಷ ಎತ್ತಿಕೊಳ್ಳಬೇಕಾಗಿದ್ದ ಹಲವಾರು ರೈಲ್ವೆ ಯೋಜನೆಗಳ ಬಗೆಗೆ ಮುಖ್ಯಮಂತ್ರಿ ಅವರು ಹಲವಾರು ಪತ್ರಗಳನ್ನು ಬರೆದು ವಿವರಿಸಿದ್ದರು. ತಾವು ಸಹ ರೈಲ್ವೆ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಮಾತನಾಡಿದ್ದೆ. ಆದರೆ, ಬಜೆಟ್ನಲ್ಲಿ ರಾಜ್ಯದಲ್ಲಾಗಬೇಕಾಗಿದ್ದ ಹಲವಾರು ಯೋಜನೆಗಳನ್ನು ಕಡೆಗಣಿಸಲಾಗಿದೆ ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದರು. </p><p><strong>ಉಚಿತ ನಿವೇಶನದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ</strong></p><p><strong>ಬೆಂಗಳೂರು, ಮಾ.5</strong>– ಕಂದಾಯ ಇಲಾಖೆಯ ಇಬ್ಬರು ನೌಕರರು ಆಶ್ರಯ ಯೋಜನೆಯಲ್ಲಿ ಉಚಿತ ನಿವೇಶನ ಕೊಡಿಸುವುದಾಗಿ ಮುಗ್ದ ಜನರನ್ನು ನಂಬಿಸಿ ದಾಖಲೆ ಪತ್ರಗಳಿಗೆಂದು ಲಕ್ಷಾಂತರ ರೂಪಾಯಿ ಹಣ ಪಡೆದು ನಕಲಿ ಹಕ್ಕುಪತ್ರಗಳನ್ನು ನೀಡಿ ವಂಚಿಸಿರುವ ಭಾರಿ ಹಗರಣವೊಂದು ಬೆಳಕಿಗೆ ಬಂದಿದೆ. </p><p>ವಿಭಾಗೀಯ ಆಯುಕ್ತರ ಕಚೇರಿಯಲ್ಲಿನ ಉಪ ತಹಶೀಲ್ದಾರ್, ಬೆಂಗಳೂರು ದಕ್ಷಿಣ ತಾಲ್ಲೂಕು ತಾವರೆಕೆರೆ ಕಂದಾಯ ವಿಭಾಗದ ನಾಲ್ಕನೇ ದರ್ಜೆ ನೌಕರರೊಬ್ಬರು ಈ ಪ್ರಕರಣದ ಆಪಾದಿತರು. ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, ಮಾ. 5</strong>– ಕರ್ನಾಟಕಕ್ಕೆ ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ತೀರಾ ಅನ್ಯಾಯವಾಗಿದೆ ಎಂದು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯದ ಸಂಸತ್ ಸದಸ್ಯರ ಸಭೆಯು, ಪ್ರಧಾನಿ ಮತ್ತು ರೈಲ್ವೆ ಸಚಿವರನ್ನು ಭೇಟಿಯಾಗಿ ಚರ್ಚಿಸಲು ಇಂದು ನಿರ್ಧರಿಸಿತು. </p><p>ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಲ್ಲಿನ ಕರ್ನಾಟಕ ಭವನದಲ್ಲಿ ಕರೆದಿದ್ದ ರಾಜ್ಯದ ಸಂಸತ್ ಸದಸ್ಯರ ಸಭೆಯಲ್ಲಿ, ರೈಲ್ವೆಯಲ್ಲಿ ರಾಜ್ಯಕ್ಕೆ ಈ ಬಾರಿ ತೀರಾ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತವಾಯಿತು. </p><p>ಆರಂಭದಲ್ಲಿ ಮಾತನಾಡಿದ ದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಬಸವರಾಜ ರಾಯಾರೆಡ್ಡಿ, ರಾಜ್ಯದಲ್ಲಿ ಈ ವರ್ಷ ಎತ್ತಿಕೊಳ್ಳಬೇಕಾಗಿದ್ದ ಹಲವಾರು ರೈಲ್ವೆ ಯೋಜನೆಗಳ ಬಗೆಗೆ ಮುಖ್ಯಮಂತ್ರಿ ಅವರು ಹಲವಾರು ಪತ್ರಗಳನ್ನು ಬರೆದು ವಿವರಿಸಿದ್ದರು. ತಾವು ಸಹ ರೈಲ್ವೆ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಮಾತನಾಡಿದ್ದೆ. ಆದರೆ, ಬಜೆಟ್ನಲ್ಲಿ ರಾಜ್ಯದಲ್ಲಾಗಬೇಕಾಗಿದ್ದ ಹಲವಾರು ಯೋಜನೆಗಳನ್ನು ಕಡೆಗಣಿಸಲಾಗಿದೆ ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದರು. </p><p><strong>ಉಚಿತ ನಿವೇಶನದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ</strong></p><p><strong>ಬೆಂಗಳೂರು, ಮಾ.5</strong>– ಕಂದಾಯ ಇಲಾಖೆಯ ಇಬ್ಬರು ನೌಕರರು ಆಶ್ರಯ ಯೋಜನೆಯಲ್ಲಿ ಉಚಿತ ನಿವೇಶನ ಕೊಡಿಸುವುದಾಗಿ ಮುಗ್ದ ಜನರನ್ನು ನಂಬಿಸಿ ದಾಖಲೆ ಪತ್ರಗಳಿಗೆಂದು ಲಕ್ಷಾಂತರ ರೂಪಾಯಿ ಹಣ ಪಡೆದು ನಕಲಿ ಹಕ್ಕುಪತ್ರಗಳನ್ನು ನೀಡಿ ವಂಚಿಸಿರುವ ಭಾರಿ ಹಗರಣವೊಂದು ಬೆಳಕಿಗೆ ಬಂದಿದೆ. </p><p>ವಿಭಾಗೀಯ ಆಯುಕ್ತರ ಕಚೇರಿಯಲ್ಲಿನ ಉಪ ತಹಶೀಲ್ದಾರ್, ಬೆಂಗಳೂರು ದಕ್ಷಿಣ ತಾಲ್ಲೂಕು ತಾವರೆಕೆರೆ ಕಂದಾಯ ವಿಭಾಗದ ನಾಲ್ಕನೇ ದರ್ಜೆ ನೌಕರರೊಬ್ಬರು ಈ ಪ್ರಕರಣದ ಆಪಾದಿತರು. ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>