ಭಾರತ ಕ್ರಿಕೆಟ್ ತಂಡ ಕೈಗೊಳ್ಳಲಿರುವ ಶ್ರೀಲಂಕಾ ಪ್ರವಾಸದಲ್ಲಿ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾ ಕೋಚ್ ಆಗಿ ತೆರಳುವ ಸಾಧ್ಯತೆ ಇರುವುದು ಸಂತಸದ ಸಂಗತಿ. ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ವಾಲ್ ಎಂದೇ ಖ್ಯಾತರಾಗಿರುವ ದ್ರಾವಿಡ್, ಭಾರತೀಯ ಕ್ರಿಕೆಟ್ ಕಂಡ ಕೆಲವೇ ಅಪರೂಪದ ಆಟಗಾರರಲ್ಲಿ ಒಬ್ಬರು. ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ನಂತರ ಭಾರತೀಯ ಆಟಗಾರರಲ್ಲಿ ಪ್ರಮುಖ ಸ್ಥಾನ ಪಡೆದಿರುವ ದ್ರಾವಿಡ್, ಭಾರತೀಯ ತಂಡಕ್ಕೆ ಕೋಚ್ ಆಗಿ ನೇಮಕಗೊಳ್ಳುವುದು ಅವರ ಪ್ರತಿಭೆಗೆ ಸಂದ ಗೌರವವೇ ಸರಿ.