<p><strong>ವಿಶಾಖಪಟ್ಟಣ:</strong> ಪ್ರವಾಸಿ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸುತ್ತಿರುವ ಟೀಮ್ ಇಂಡಿಯಾ, ಮೊದಲ ದಿನದ ಊಟದ ವಿರಾಮದ ಹೊತ್ತಿಗೆ 31 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. </p><p>ಎಡಗೈ ಆರಂಭಿಕ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಗಳಿಸಿದ್ದಾರೆ. ಜೈಸ್ವಾಲ್ 51 ರನ್ ಗಳಿಸಿ (6 ಬೌಂಡರಿ, 1 ಸಿಕ್ಸರ್) ಕ್ರೀಸ್ನಲ್ಲಿದ್ದಾರೆ. ಅವರಿಗೆ ಶ್ರೇಯಸ್ ಅಯ್ಯರ್ (4*) ಸಾಥ್ ನೀಡುತ್ತಿದ್ದಾರೆ. </p><p><strong>ನಾಯಕ ರೋಹಿತ್ ವೈಫಲ್ಯ...</strong></p><p>ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ ಮೊದಲ ವಿಕೆಟ್ಗೆ 40 ರನ್ಗಳ ಜೊತೆಯಾಟದಲ್ಲಿ ಭಾಗಿಯಾದರು. ಆದರೆ 14 ರನ್ ಮಾತ್ರ ಗಳಿಸಿದ ರೋಹಿತ್, ಚೊಚ್ಚಲ ಪಂದ್ಯ ಆಡುತ್ತಿರುವ ಸ್ಪಿನ್ನರ್ ಶೋಯೆಬ್ ಬಷೀರ್ಗೆ ವಿಕೆಟ್ ಒಪ್ಪಿಸಿದರು. </p><p>ಶುಭಮನ್ ಗಿಲ್ 34 ರನ್ ಗಳಿಸಿ ಔಟ್ ಆದರು. ಅವರ ವಿಕೆಟ್ ಜೇಮ್ಸ್ ಆ್ಯಂಡರ್ಸನ್ ಕಬಳಿಸಿದರು. </p><p><strong>ಪಾಟೀದಾರ್ ಪದಾರ್ಪಣೆ, ಸರ್ಫರಾಜ್ಗಿಲ್ಲ ಅವಕಾಶ; ಭಾರತ ಬ್ಯಾಟಿಂಗ್....</strong></p><p>ಈ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. </p><p>ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೆ.ಎಲ್. ರಾಹುಲ್ ಹಾಗೂ ರವೀಂದ್ರ ಜಡೇಜ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅಲ್ಲದೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ. </p><p>ಇದರಿಂದಾಗಿ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ರಜತ್ ಪಾಟೀದಾರ್ ಪದಾರ್ಪಣೆ ಮಾಡಿದ್ದು, ಕುಲದೀಪ್ ಯಾದವ್ ಹಾಗೂ ಮುಕೇಶ್ ಕುಮಾರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. </p><p>ಮತ್ತೊಂದೆಡೆ ಯುವ ಬ್ಯಾಟರ್ ಸರ್ಫರಾಜ್ ಖಾನ್ ಅವಕಾಶ ವಂಚಿತರಾಗಿದ್ದಾರೆ. </p><p>ಅತ್ತ ಇಂಗ್ಲೆಂಡ್ ತಂಡಕ್ಕೆ ಅನುಭವಿ ಬೌಲರ್ ಜೇಮ್ಸ್ ಆ್ಯಂಡರ್ಸನ್ ಸೇರ್ಪಡೆಗೊಂಡಿದ್ದಾರೆ. ಗಾಯಾಳು ಜಾಕ್ ಲೀಚ್ ಬದಲಿಗೆ ಶೋಯೆಬ್ ಬಷೀರ್ಗೆ ಚೊಚ್ಚಲ ಟೆಸ್ಟ್ ಕ್ಯಾಪ್ ಲಭಿಸಿದೆ. ಮಾರ್ಕ್ ವುಡ್ ಅವರನ್ನು ಕೈಬಿಡಲಾಗಿದೆ. </p><p>ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 28 ರನ್ ಅಂತರದ ಜಯ ಗಳಿಸಿರುವ ಇಂಗ್ಲೆಂಡ್, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. </p><p><strong>ಭಾರತ ತಂಡ ಇಂತಿದೆ:</strong></p><p>ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮುಕೇಶ್ ಕುಮಾರ್. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶಾಖಪಟ್ಟಣ:</strong> ಪ್ರವಾಸಿ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸುತ್ತಿರುವ ಟೀಮ್ ಇಂಡಿಯಾ, ಮೊದಲ ದಿನದ ಊಟದ ವಿರಾಮದ ಹೊತ್ತಿಗೆ 31 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. </p><p>ಎಡಗೈ ಆರಂಭಿಕ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಗಳಿಸಿದ್ದಾರೆ. ಜೈಸ್ವಾಲ್ 51 ರನ್ ಗಳಿಸಿ (6 ಬೌಂಡರಿ, 1 ಸಿಕ್ಸರ್) ಕ್ರೀಸ್ನಲ್ಲಿದ್ದಾರೆ. ಅವರಿಗೆ ಶ್ರೇಯಸ್ ಅಯ್ಯರ್ (4*) ಸಾಥ್ ನೀಡುತ್ತಿದ್ದಾರೆ. </p><p><strong>ನಾಯಕ ರೋಹಿತ್ ವೈಫಲ್ಯ...</strong></p><p>ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ ಮೊದಲ ವಿಕೆಟ್ಗೆ 40 ರನ್ಗಳ ಜೊತೆಯಾಟದಲ್ಲಿ ಭಾಗಿಯಾದರು. ಆದರೆ 14 ರನ್ ಮಾತ್ರ ಗಳಿಸಿದ ರೋಹಿತ್, ಚೊಚ್ಚಲ ಪಂದ್ಯ ಆಡುತ್ತಿರುವ ಸ್ಪಿನ್ನರ್ ಶೋಯೆಬ್ ಬಷೀರ್ಗೆ ವಿಕೆಟ್ ಒಪ್ಪಿಸಿದರು. </p><p>ಶುಭಮನ್ ಗಿಲ್ 34 ರನ್ ಗಳಿಸಿ ಔಟ್ ಆದರು. ಅವರ ವಿಕೆಟ್ ಜೇಮ್ಸ್ ಆ್ಯಂಡರ್ಸನ್ ಕಬಳಿಸಿದರು. </p><p><strong>ಪಾಟೀದಾರ್ ಪದಾರ್ಪಣೆ, ಸರ್ಫರಾಜ್ಗಿಲ್ಲ ಅವಕಾಶ; ಭಾರತ ಬ್ಯಾಟಿಂಗ್....</strong></p><p>ಈ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. </p><p>ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೆ.ಎಲ್. ರಾಹುಲ್ ಹಾಗೂ ರವೀಂದ್ರ ಜಡೇಜ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅಲ್ಲದೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ. </p><p>ಇದರಿಂದಾಗಿ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ರಜತ್ ಪಾಟೀದಾರ್ ಪದಾರ್ಪಣೆ ಮಾಡಿದ್ದು, ಕುಲದೀಪ್ ಯಾದವ್ ಹಾಗೂ ಮುಕೇಶ್ ಕುಮಾರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. </p><p>ಮತ್ತೊಂದೆಡೆ ಯುವ ಬ್ಯಾಟರ್ ಸರ್ಫರಾಜ್ ಖಾನ್ ಅವಕಾಶ ವಂಚಿತರಾಗಿದ್ದಾರೆ. </p><p>ಅತ್ತ ಇಂಗ್ಲೆಂಡ್ ತಂಡಕ್ಕೆ ಅನುಭವಿ ಬೌಲರ್ ಜೇಮ್ಸ್ ಆ್ಯಂಡರ್ಸನ್ ಸೇರ್ಪಡೆಗೊಂಡಿದ್ದಾರೆ. ಗಾಯಾಳು ಜಾಕ್ ಲೀಚ್ ಬದಲಿಗೆ ಶೋಯೆಬ್ ಬಷೀರ್ಗೆ ಚೊಚ್ಚಲ ಟೆಸ್ಟ್ ಕ್ಯಾಪ್ ಲಭಿಸಿದೆ. ಮಾರ್ಕ್ ವುಡ್ ಅವರನ್ನು ಕೈಬಿಡಲಾಗಿದೆ. </p><p>ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 28 ರನ್ ಅಂತರದ ಜಯ ಗಳಿಸಿರುವ ಇಂಗ್ಲೆಂಡ್, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. </p><p><strong>ಭಾರತ ತಂಡ ಇಂತಿದೆ:</strong></p><p>ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮುಕೇಶ್ ಕುಮಾರ್. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>