<p><strong>ಬೆಂಗಳೂರು:</strong> ಭಾನುವಾರ ಬೆಳಗಿನ ಜಾವದವರೆಗೂ ನಗರದಲ್ಲಿ ಸುರಿದ ಮಳೆಯಿಂದಾಗಿ ಆಲೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಕೇರಳ ನಡುವಿನ ರಣಜಿ ಟ್ರೋಫಿಯ ಎಲೀಟ್ ಸಿ ಗುಂಪಿನ ಪಂದ್ಯದ ಮೂರನೇ ದಿನದಾಟ ಒಂದೂ ಎಸೆತ ಕಾಣದೆ ರದ್ದಾಯಿತು.</p>.<p>ಆಲೂರಿನ ಕೆಎಸ್ಸಿಎ ಕ್ರೀಡಾಂಗಣವು ಮೊದಲೆರಡು ದಿನದಂತೆ ಭಾನುವಾರವೂ ಭಿನ್ನವಾಗಿರಲಿಲ್ಲ. ರಾತ್ರಿ ಸುರಿದ ಮಳೆಯಿಂದಾಗಿ ಮೈದಾನದ ವಿವಿಧ ಭಾಗಗಳು ತೇವಗೊಂಡಿದ್ದರಿಂದ ಆಟ ಸಾಧ್ಯವಾಗಲಿಲ್ಲ.</p>.<p>ಮೊದಲ ದಿನ ಕೇರಳ ತಂಡ 23 ಓವರುಗಳಲ್ಲಿ ಕೇರಳ ಮೊದಲ ಇನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೇ 88 ರನ್ ಹೊಡೆದಿತ್ತು. ಎರಡನೇ ದಿನವಾದ ಶನಿವಾರ 27 ಓವರುಗಳ ಆಟ ಸಾಧ್ಯವಾಗಿತ್ತು. ಹೀಗಾಗಿ ಒಟ್ಟು 50 ಓವರ್ಗಳಲ್ಲಿ 3 ವಿಕೆಟ್ಗೆ 161 ರನ್ ಗಳಿಸಿದೆ.</p>.<p>ಪಂದ್ಯ ಮುಕ್ತಾಯಕ್ಕೆ ಇನ್ನು ಒಂದು ದಿನ ಮಾತ್ರ ಉಳಿದಿದೆ. ಹೀಗಾಗಿ, ಪಂದ್ಯ ಡ್ರಾನಲ್ಲಿ ಮುಕ್ತಾಯವಾಗುವುದು ಬಹುತೇಕ ಖಚಿತವಾಗಿದ್ದು, ಪಾಯಿಂಟ್ಸ್ ಹಂಚಿಕೆಯಾಗಲಿದೆ. ಮೊದಲ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಡ್ರಾ ಸಾಧಿಸಿರುವ ಕರ್ನಾಟಕ ತಂಡದ ಕ್ವಾರ್ಟರ್ ಫೈನಲ್ ಹಾದಿ ಇನ್ನಷ್ಟು ಕಠಿಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾನುವಾರ ಬೆಳಗಿನ ಜಾವದವರೆಗೂ ನಗರದಲ್ಲಿ ಸುರಿದ ಮಳೆಯಿಂದಾಗಿ ಆಲೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಕೇರಳ ನಡುವಿನ ರಣಜಿ ಟ್ರೋಫಿಯ ಎಲೀಟ್ ಸಿ ಗುಂಪಿನ ಪಂದ್ಯದ ಮೂರನೇ ದಿನದಾಟ ಒಂದೂ ಎಸೆತ ಕಾಣದೆ ರದ್ದಾಯಿತು.</p>.<p>ಆಲೂರಿನ ಕೆಎಸ್ಸಿಎ ಕ್ರೀಡಾಂಗಣವು ಮೊದಲೆರಡು ದಿನದಂತೆ ಭಾನುವಾರವೂ ಭಿನ್ನವಾಗಿರಲಿಲ್ಲ. ರಾತ್ರಿ ಸುರಿದ ಮಳೆಯಿಂದಾಗಿ ಮೈದಾನದ ವಿವಿಧ ಭಾಗಗಳು ತೇವಗೊಂಡಿದ್ದರಿಂದ ಆಟ ಸಾಧ್ಯವಾಗಲಿಲ್ಲ.</p>.<p>ಮೊದಲ ದಿನ ಕೇರಳ ತಂಡ 23 ಓವರುಗಳಲ್ಲಿ ಕೇರಳ ಮೊದಲ ಇನಿಂಗ್ಸ್ನಲ್ಲಿ ವಿಕೆಟ್ ನಷ್ಟವಿಲ್ಲದೇ 88 ರನ್ ಹೊಡೆದಿತ್ತು. ಎರಡನೇ ದಿನವಾದ ಶನಿವಾರ 27 ಓವರುಗಳ ಆಟ ಸಾಧ್ಯವಾಗಿತ್ತು. ಹೀಗಾಗಿ ಒಟ್ಟು 50 ಓವರ್ಗಳಲ್ಲಿ 3 ವಿಕೆಟ್ಗೆ 161 ರನ್ ಗಳಿಸಿದೆ.</p>.<p>ಪಂದ್ಯ ಮುಕ್ತಾಯಕ್ಕೆ ಇನ್ನು ಒಂದು ದಿನ ಮಾತ್ರ ಉಳಿದಿದೆ. ಹೀಗಾಗಿ, ಪಂದ್ಯ ಡ್ರಾನಲ್ಲಿ ಮುಕ್ತಾಯವಾಗುವುದು ಬಹುತೇಕ ಖಚಿತವಾಗಿದ್ದು, ಪಾಯಿಂಟ್ಸ್ ಹಂಚಿಕೆಯಾಗಲಿದೆ. ಮೊದಲ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ಧ ಡ್ರಾ ಸಾಧಿಸಿರುವ ಕರ್ನಾಟಕ ತಂಡದ ಕ್ವಾರ್ಟರ್ ಫೈನಲ್ ಹಾದಿ ಇನ್ನಷ್ಟು ಕಠಿಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>