ಗಯಾನ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಭಾರತೀಯ ಆಟಗಾರರು ಚೆಂಡನ್ನು ವಿರೂಪಗೊಳಿಸಿದ್ದಾರೆ ಎಂದು ಆರೋಪ ಮಾಡಿರುವ ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ಗೆ ಟೀಮ್ ಇಂಡಿಯಾ ಕಪ್ತಾನ ರೋಹಿತ್ ಶರ್ಮಾ ತಿರುಗೇಟು ನೀಡಿದ್ದಾರೆ.
'ಸ್ವಲ್ಪ ಬುದ್ಧಿಶಕ್ತಿ ಉಪಯೋಗಿಸಿ' ಎಂದು ರೋಹಿತ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಸೆಮಿಫೈನಲ್ಗೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ರೋಹಿತ್ ಉತ್ತರ ನೀಡಿದ್ದಾರೆ.
'ಇದಕ್ಕೆ ಏನು ಉತ್ತರ ನೀಡಲಿ? ಇಷ್ಟು ಬಿಸಿಲಿನ ವಾತಾವರಣದಲ್ಲಿ ಆಡುವಾಗ ವಿಕೆಟ್ ಕೂಡ ಒಣಗಿರುತ್ತದೆ. ಎಲ್ಲ ತಂಡಗಳ ಬೌಲರ್ಗಳು ರಿವರ್ಸ್ ಸ್ವಿಂಗ್ ಮಾಡುತ್ತಿದ್ದಾರೆ. ಎಲ್ಲರಿಗೂ ಸಮಾನವಾಗಿದೆ. ನಮಗೆ ಮಾತ್ರ ಏಕೆ? ಕೆಲವೊಮ್ಮೆ ಬುದ್ಧಿಶಕ್ತಿ ಉಪಯೋಗಿಸಬೇಕಾಗುತ್ತದೆ. ಯಾವ ಪರಿಸ್ಥಿತಿಯಲ್ಲಿ ಆಡುತ್ತಿದ್ದೇವೆ ಎಂಬುದನ್ನು ಅರಿತುಕೊಳ್ಳಬೇಕಾಗುತ್ತದೆ. ಇಂಗ್ಲೆಂಡ್ ಅಥವಾ ಆಸ್ಟ್ರೇಲಿಯಾದಲ್ಲಿ ಪಂದ್ಯ ನಡೆಯುತ್ತಿಲ್ಲ' ಎಂದು ಹೇಳಿದ್ದಾರೆ.