ಫೈನಲ್ನಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಳಿಕ ಮಾತನಾಡಿದ ರಾಹುಲ್ ದ್ರಾವಿಡ್, ‘ಆಟಗಾರನಾಗಿ ಟ್ರೋಫಿ ಜಯಿಸುವ ಅದೃಷ್ಠ ನನಗಿರಲಿಲ್ಲ. ನಾನು ನನ್ನ ಗರಿಷ್ಠ ಪ್ರಯತ್ನವನ್ನೇ ಮಾಡಿದ್ದೇನೆ. ಅವೆಲ್ಲಾ ಆಟದ ಒಂದು ಭಾಗವಷ್ಟೇ’ ಎಂದು ಹೇಳಿದ್ದಾರೆ.
ನನಗೆ ತಿಳಿದಿರುವ ಹಲವು ಆಟಗಾರರು ಟ್ರೋಫಿ ಗೆದ್ದಿಲ್ಲ. ಭಾರತ ತಂಡಕ್ಕೆ ತರಬೇತಿ ನೀಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಠ. ಈ ಯುವಕರು ನಾನು ಟ್ರೋಫಿ ಗೆಲ್ಲುವ ಹಾಗೆ ಮಾಡಿದ್ದಾರೆ. ಇದೊಂದು ಅದ್ಭುತ ಅನುಭವ. ನಾನು ನನ್ನ ಕೆಲಸ ಮಾಡಿದ್ದೇನೆ ಅಷ್ಟೇ’ ಎಂದು ದ್ರಾವಿಡ್ ನುಡಿದಿದ್ದಾರೆ.