ವಾನ್ ಹೇಳಿಕೆಯನ್ನು ಸಮರ್ಥಿಸಿದ ಗಿಲ್ಕ್ರಿಸ್ಟ್, ‘ಕ್ರಿಕೆಟ್ ಬಗ್ಗೆ ನಿಜವಾದ ಪ್ರೀತಿ ಇಟ್ಟುಕೊಂಡ ಅಭಿಮಾನಿಗಳೂ ಅಪಾರ ಸಂಖ್ಯೆಯಲ್ಲಿದ್ದಾರೆ. ವೇಳಾಪಟ್ಟಿಯಲ್ಲಿ ರಾಜೀ ಮಾಡಿಕೊಳ್ಳಲಾಗಿದೆ ಎಂಬುದು ಅವರೆಲ್ಲರಿಗೂ ಗೊತ್ತಿದೆ. ಇಲ್ಲಿ ಭಾರತ ಉತ್ತಮ ತಂಡವಾಗಿದೆ. ಟೂರ್ನಿಯಲ್ಲಿ ಇದುವರೆಗೂ ಒಂದೂ ಪಂದ್ಯ ಸೋತಿಲ್ಲ. ದಕ್ಷಿಣ ಆಫ್ರಿಕಾ ಕೂಡ ಅಷ್ಟೇ. ಆದರೆ ಈ ಟೂರ್ನಿಯಲ್ಲಿ ಭಾರತ ಗೆದ್ದು ತೋರಿಸಬೇಕು’ ಎಂದರು.