ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ: ಆ. 24ರಿಂದ ಕುಸ್ತಿ ತೀರ್ಪುಗಾರರ ರಾಜ್ಯಮಟ್ಟದ ಕಾರ್ಯಾಗಾರ

Published 22 ಆಗಸ್ಟ್ 2024, 0:54 IST
Last Updated 22 ಆಗಸ್ಟ್ 2024, 0:54 IST
ಅಕ್ಷರ ಗಾತ್ರ

ದಾವಣಗೆರೆ: ಕರ್ನಾಟಕ ಕುಸ್ತಿ ಸಂಘವು ಇದೇ ಮೊದಲ ಬಾರಿಗೆ ತೀರ್ಪುಗಾರರಿಗಾಗಿ ರಾಜ್ಯಮಟ್ಟದ ಕಾರ್ಯಾಗಾರ ಹಮ್ಮಿಕೊಂಡಿದೆ. ಆಗಸ್ಟ್‌ 24 ಮತ್ತು 25ರಂದು ನಗರದ ಆಂಜನೇಯ ಬಡಾವಣೆಯ ಒಳಾಂಗಣ ಕ್ರೀಡಾಂಗಣ ದಲ್ಲಿ ಕಾರ್ಯಾಗಾರ ನಡೆಯಲಿದೆ. 

‘ಡಬ್ಲ್ಯುಎಫ್‌ಐನ ಪ್ರತಿನಿಧಿಯೊಬ್ಬರು ಪಾಲ್ಗೊಳ್ಳುತ್ತಿದ್ದು, ತೀರ್ಪುಗಾರರಿಗೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ. ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರುವ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಿದ ಅನುಭವವುಳ್ಳ 60 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ₹3,000 ಪ್ರವೇಶ ಶುಲ್ಕ ಇದ್ದು, ಇಲ್ಲಿ ತೇರ್ಗಡೆ ಹೊಂದಿದವರಿಗೆ ಪ್ರಮಾಣ ಪತ್ರದೊಂದಿಗೆ ಕಿಟ್‌ ನೀಡಲಾಗುತ್ತದೆ. ಆ.24ರಂದು ಬೆಳಿಗ್ಗೆ 8 ರಿಂದ 10 ಗಂಟೆಯೊಳಗೆ ಒಳಾಂಗಣ ಕ್ರೀಡಾಂಗಣದಲ್ಲಿ ಹೆಸರು ನೋಂದಾಯಿಸಿಕೊಳ್ಳ ಬಹುದು’ ಎಂದು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್‌ ಶೆಟ್ಟಿ ತಿಳಿಸಿದ್ದಾರೆ.

ಮಾಹಿತಿಗೆ ಕರ್ನಾಟಕ ಕುಸ್ತಿ ಸಂಘದ ತಾಂತ್ರಿಕ ಸಮಿತಿ ಅಧ್ಯಕ್ಷ ಕೆ. ವಿನೋದ್‌ ಕುಮಾರ್‌ (ಮೊ 8971388143) ಸಂಪರ್ಕಿಸಬಹುದು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT